ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಅ.15- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.ಬೆಂಗಳೂರು, ತುಮಕೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಜನರ ಜೀವನ ಹೈರಾಣಾಗಿದೆ. ಬೆಳಿಗ್ಗೆ ಶಾಲಾ-ಕಾಲೇಜುಗಳಿಗೆ ಕೆಲಸಕ್ಕೆ ಹೋಗಲಾರದೇ ಜನ ಪರಿತಪಿಸುವಂತಾಗಿತ್ತು. ಬೆಳ್ಳಂಬೆಳಿಗ್ಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ನಲ್ಲಿ ಜನ ಸಿಲುಕಿ ತೊಂದರೆ ಅನುಭವಿಸುವಂತಾಯಿತು. ನಿನ್ನೆ ತಡರಾತ್ರಿಯಲ್ಲೂ … Continue reading ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ