ಅಧಿಕಾರಿಗಳ ನಿರ್ಲಕ್ಷ್ಯ, ಬೆಂಗಳೂರಿನಲ್ಲಿ ಮತ್ತೆ ರಾಜಕಾಲುವೆ ಒತ್ತುವರಿ

ಬೆಂಗಳೂರು,ಮೇ.16- ಮಳೆಗಾಲದಲ್ಲಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ನಿರ್ದಾಕ್ಷಿಣ್ಯವಾಗಿ ರಾಜಕಾಲುವೆ ಒತ್ತುವರಿ ತೆರವು ಮಾಡುವುದಾಗಿ ಬೊಬ್ಬೆ ಹೊಡೆಯುವ ಅಧಿಕಾರಿಗಳು ನಂತರ ತೆಪ್ಪಗಾಗುವುದರಿಂದ ಒತ್ತುವರಿ ಕಾರ್ಯ ನಿರಂತರವಾಗಿ ಮುಂದುವರೆದುಕೊಂಡು ಬರುತ್ತಿದೆ. ಅಧಿಕಾರಿಗಳ ಈ ಬೆಜವಬ್ದಾರಿತನವನ್ನೇ ಬಂಡವಾಳ ಮಾಡಿಕೊಂಡಿರುವ ಭೂಗಳ್ಳರು ರಾಜಕಾಲುವೆ ಒತ್ತುವರಿ ಕಾರ್ಯವನ್ನು ಮುಂದುವರೆಸಿದ್ದಾರೆ. ಹೀಗಾಗಿ ಕಳೆದ ಎಂಟು ತಿಂಗಳಲ್ಲಿ 1134 ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ಮಾಡಲಾಗಿದೆ.ನಗರದಲ್ಲಿರುವ 860 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಈಗಾಗಲೇ 829 ಕಡೆಗಳಲ್ಲಿ ಭೂಗಳ್ಳರು ಒತ್ತುವರಿ ಮಾಡಿಕೊಂಡಿದ್ದಾರೆ.ಈಗ ಮತ್ತೆ ಕಳೆದ 8 ತಿಂಗಳಿನಲ್ಲಿ 1134 ಕಡೆ … Continue reading ಅಧಿಕಾರಿಗಳ ನಿರ್ಲಕ್ಷ್ಯ, ಬೆಂಗಳೂರಿನಲ್ಲಿ ಮತ್ತೆ ರಾಜಕಾಲುವೆ ಒತ್ತುವರಿ