Sunday, September 8, 2024
Homeರಾಷ್ಟ್ರೀಯ | Nationalರಾಮಮಂದಿರ ಉದ್ಘಾಟನೆ ಸಂಭ್ರಮ ಹಾಳುಮಾಡಲು ಕಾಂಗ್ರೆಸ್ ಕುತಂತ್ರ : ಬಿಜೆಪಿ ಆರೋಪ

ರಾಮಮಂದಿರ ಉದ್ಘಾಟನೆ ಸಂಭ್ರಮ ಹಾಳುಮಾಡಲು ಕಾಂಗ್ರೆಸ್ ಕುತಂತ್ರ : ಬಿಜೆಪಿ ಆರೋಪ

ಬೆಂಗಳೂರು,ಜ.6- ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನೆರವೇರಲಿದೆ. ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ಇಡೀ ದೇಶವೇ ಇರುವಾಗ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆರೋಪಗಳ ಮಳೆ ಸುರಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್, ಅಯೋಧ್ಯೆಗೆ ಹೋಗುವವರಿಗೆ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಲಾಗಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಆರೋಪಿಸಿದೆ.

ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್

ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿಗೆ ಸಿದ್ಧತೆ ನಡೆದಿದೆ. ರಾಮ ಮಂದಿರ ಉದ್ಘಾಟನೆಯ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತಗೊಳಿಸಲು ತಂತ್ರ ಹೆಣೆಯಲಾಗಿದೆ. ಮನೆ ಮನೆಯ ಟಿವಿ ಕೇಬಲ್ ಸಂಪರ್ಕ ತಪ್ಪಿಸುವ ದುರುದ್ದೇಶ ಕಾಂಗ್ರೆಸಿನದ್ದಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಕ್ಸ್‍ನಲ್ಲಿ ಬರೆದುಕೊಂಡಿದೆ.

RELATED ARTICLES

Latest News