Saturday, July 27, 2024
Homeರಾಷ್ಟ್ರೀಯರಾಮೋಜಿ ರಾವ್‌ ನಿಧನಕ್ಕೆ ಪ್ರಧಾನಿ ಸೇರಿದಂತೆ ಹಲವು ಗಣ್ಯರಿಂದ ಸಂತಾಪ

ರಾಮೋಜಿ ರಾವ್‌ ನಿಧನಕ್ಕೆ ಪ್ರಧಾನಿ ಸೇರಿದಂತೆ ಹಲವು ಗಣ್ಯರಿಂದ ಸಂತಾಪ

ಹೈದ್ರಾಬಾದ್‌, ಜೂ.8- ಇಂದು ಮುಂಜಾನೆ ಇಹಲೋಕ ತ್ಯಜಿಸಿದ ರಾಮೋಜಿರಾವ್‌ ಸಮೂಹ ಸಂಸ್ಥೆಯ ಅಧ್ಯಕ್ಷ ರಾಮೋಜಿರಾವ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮೋಜಿರಾವ್‌ ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ ದಾರ್ಶನಿಕ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ ಎಕ್‌್ಸ ಖಾತೆಯಲ್ಲಿ ಬಣ್ಣಿಸಿದ್ದಾರೆ. ಅವರ ನಿಧನ ತೀವ್ರ ದುಃಖ ತಂದಿದೆ. ಪತ್ರಿಕೋದ್ಯಮ ಮತ್ತು ಚಿತ್ರರಂಗದಲ್ಲಿ ಅವರು ಅಚ್ಚಳಿಯದ ಛಾಪು ಮೂಡಿಸಿದ್ದಾರೆ.

ಅವರ ಅವಿರತ ಪ್ರಯತ್ನಗಳ ಫಲವಾಗಿ ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ಹೊಸ ನಾವಿನ್ಯತೆಯನ್ನು ಸೃಷ್ಟಿಸಿದ್ದಾರೆ ಎಂದು ಬಣ್ಣಿಸಿದ್ದಾರೆ.ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ರಾಮೋಜಿರಾವ್‌ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಸಾಧನೆಗಳನ್ನು ಕೊಂಡಾಡಿದ್ದಾರೆ.

ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅವರು, 2 ತೆಲುಗು ರಾಜ್ಯಗಳು ಸೇರಿದಂತೆ ದೇಶಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ರಾಮೋಜಿರಾವ್‌ ಅವರ ಸಾವು ಕೇವಲ ತೆಲುಗು ಜನರಿಗೆ ಆದ ನಷ್ಟವಲ್ಲ. ಇಡೀ ದೇಶಕ್ಕಾದ ನಷ್ಟ. ಇದೇ ವೇಳೆ ಅವರ ಒಡನಾಟವನ್ನು ಸರಿಸಿಕೊಂಡಿದ್ದಾರೆ. ನಟ ಚಿರಂಜೀವಿ, ಖುಷ್ಬು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News