Sunday, September 8, 2024
Homeರಾಷ್ಟ್ರೀಯ | Nationalಈನಾಡು ಗ್ರೂಪ್‌ ಅಧ್ಯಕ್ಷ, ಪದ್ಮವಿಭೂಷಣ ರಾಮೋಜಿ ರಾವ್‌ ವಿಧಿವಶ

ಈನಾಡು ಗ್ರೂಪ್‌ ಅಧ್ಯಕ್ಷ, ಪದ್ಮವಿಭೂಷಣ ರಾಮೋಜಿ ರಾವ್‌ ವಿಧಿವಶ

ಹೈದರಾಬಾದ್‌,ಜೂ.8- ತೀವ್ರ ಅನಾರೋಗ್ಯದಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈನಾಡು ಗ್ರೂಪ್‌ ಅಧ್ಯಕ್ಷರಾದ ಪದ್ಮವಿಭೂಷಣ ರಾಮೋಜಿ ರಾವ್‌ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಇದೇ ತಿಂಗಳ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಅವರು ಇಹಲೋಕ ತ್ಯಜಿಸಿದ್ದಾರೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿಯಲ್ಲಿ ನವೆಂಬರ್‌ 16, 1936 ರಂದು ರಾಮೋಜಿ ರಾವ್‌ ಜನಿಸಿದ್ದರು. 1969ರಲ್ಲಿ ಅನ್ನದಾತ ಪತ್ರಿಕೆ ಆರಂಭಿಸುವ ಮೂಲಕ ಅವರು ಮಾಧ್ಯಮ ಕ್ಷೇತ್ರಕ್ಕೆ ಕಾಲಿಟ್ಟರು. ಬಳಿಕ ಈನಾಡು ದಿನಪತ್ರಿಕೆ ಮೂಲಕ ತೆಲುಗು ಪತ್ರಿಕಾ ಲೋಕದಲ್ಲಿ ಕ್ರಾಂತಿ ಹುಟ್ಟು ಹಾಕಿದರು.

10 ಆಗಸ್ಟ್‌ 1974ರಂದು ವಿಶಾಖಪಟ್ಟಣಂನಲ್ಲಿ ಪತ್ರಿಕೆ ಆರಂಭಿಸಿದ್ದರು. ತೆಲುಗು ಪತ್ರಿಕೋದ್ಯಮ ಲೋಕದಲ್ಲಿ ಈನಾಡು ಹೊಸ ಯುಗಕ್ಕೆ ನಾಂದಿ ಹಾಡಿತು. ಆರಂಭವಾದ ನಾಲ್ಕೇ ವರ್ಷಗಳಲ್ಲಿ ಈನಾಡು ಓದುಗರ ಅಚ್ಚುಮೆಚ್ಚಿನ ದಿನಪತ್ರಿಕೆಯಾಗಿ ಹೊರಹೊಮಿತು. ಜೊತೆಗೆ ಸಿತಾರಾ ಸಿನಿಪತ್ರಿಕೆಯೂ ಕೂಡ ರಾಮೋಜಿ ಅವರ ಪ್ರಮುಖ ಮೈಲಿಗಲ್ಲು ಆಗಿದೆ.

ಅವರು ಅದ್ಭುತ ಫಿಲ್‌ಸಿಟಿ ನಿರ್ಮಿಸಿದ್ದು, ತೆಲುಗು ಜನರ ಹೃದಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಗುರಿ ಸಾಧನೆಗೆ ದಶಕಗಳ ಕಾಲ ಅವಿರತವಾಗಿ ಶ್ರಮಿಸಿದ ಯೋಧ ರಾಮೋಜಿ ರಾವ್‌ ಅವರಾಗಿದ್ದಾರೆ. ರೈತನ ಮಗನಾಗಿ ಹುಟ್ಟಿ ಬೆಳೆದ ರಾಮೋಜಿ ರಾವ್‌ ಅವರು ಯಶಸ್ವಿ ಉದ್ಯಮಿಯಾಗಿ, ಮಾಧ್ಯಮ ಸಾಮ್ರಾಜ್ಯವನ್ನೇ ಕಟ್ಟಿ ಬೆಳೆಸಿದವರು. ಈಟಿವಿ ಸುದ್ದಿ ವಾಹಿನಿ ಮೂಲಕ ಮಾಧ್ಯಮ ಜಗತ್ತಿನಲ್ಲಿ ದಿಗ್ಗಜರಾಗಿ ಪ್ರಖ್ಯಾತರಾಗಿದ್ದರು.

RELATED ARTICLES

Latest News