ಬೆಂಗಳೂರು, ಫೆ. 9- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ನಾಯಕ ಮಯಾಂಕ್ ಅಗರ್ವಾಲ್ (214) ರ ಆಕರ್ಷಕ ದ್ವಿಶತಕದ ನೆರವಿನಿಂದ ಸೌರಾಷ್ಟರ ವಿರುದ್ಧ ನಡೆಯುತ್ತಿರುವ ಮೊದಲ ಇನ್ನಿಂಗ್ಸ್ನಲ್ಲಿ ಬೃಹತ್ ಮೊತ್ತ ಕಲೆ ಹಾಕುವತ್ತ ಹೆಜ್ಜೆ ಹಾಕಿದೆ.
ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ 229ಕ್ಕೆ 5 ವಿಕೆಟ್ ಕಳೆದುಕೊಂಡು ಸುಭದ್ರ ಸ್ಥಿತಿಯಲ್ಲಿದ್ದ ಕರ್ನಾಟಕ ತಂಡ, 3ನೇ ದಿನದ ಅರಂಭದಲ್ಲೇ ಶ್ರೀನಿವಾಸ್ ಶರತ್(66 ರನ್, 4 ಬೌಂಡರಿ) ವಿಕೆಟ್ ಕಳೆದುಕೊಂಡು ಹಿನ್ನೆಡೆ ಅನುಭವಿಸಿತ್ತು.
ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಬಾರಿ ಪ್ರತಿಭಟನೆ
ಆದರೆ ದಿಟ್ಟತನ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಮಯಾಂಕ್ ಅಗರ್ವಾಲ್ ತಂಡದ ಮೊತ್ತವನ್ನು 350ರ ಗಡಿ ಮುಟ್ಟಿಸಿದರು.
ಪತ್ರಿಕೆ ಮುದ್ರಣಕ್ಕೆ ಹೋಗುವ ಮುನ್ನ ಕರ್ನಾಟಕ 9 ವಿಕೆಟ್ಗಳನ್ನು ಕಳೆದುಕೊಂಡು 373 ರನ್ ಗಳಿಸಿದ್ದರೆ ಮಯಾಂಕ್ 218 ರನ್ ಗಳಿಸಿದ್ದರು.
Ranji Trophy, Semi Final, Mayank Agarwal, double-century,