ಮೈಸೂರು, ಜು. 19- ರಾಜ್ಯದಲ್ಲಿ ಈ ಕೆವೈಸಿ ಆಗದೇ ಇರುವ ಪಡಿತರ ಚೀಟಿದಾರರ ಈ ಕೆವೈಸಿಯನ್ನು ಆದಷ್ಟು ಬೇಗ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕೆವೈಸಿ ಆಗದೇ ಇರುವ ಪಡಿತರ ದಾರರ ಈ ಕೆವೈಸಿ ಆದಷ್ಟು ಬೇಗ ಮಾಡಿಸಿ. ಈ ಕೆವೈಸಿ ಮಾಡಿಸದ ಸದಸ್ಯರ ಈ ಕೆವೈಸಿ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಈ ಕೆವೈಸಿ ಮಾಡಿಸದ ಸದಸ್ಯರಿಗೆ ಮುಂದಿನ ಒಂದು ತಿಂಗಳ ಅವಕಾಶ ನೀಡಿ, ಆಗಲೂ ಈ ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ನಿಲ್ಲಿಸುವುದಾಗಿ ಕಾರ್ಡ್ದಾರರಿಗೆ ಎಚ್ಚರಿಕೆ ನೀಡಬೇಕು. ಅನಗತ್ಯವಾಗಿ ಕಾರ್ಡ್ಗಳು ವಿತರಣೆ ಆದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಬೇಕಿರುವ ವಾಹನ ಸೌಲಭ್ಯ ಹಾಗೂ ಕಾನೂನು ಮಾಪನ ನಿರೀಕ್ಷಕರ ಹ್ದುೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಆಹಾರ ಧಾನ್ಯಗಳು ಗೋದಾಮುಗಳಲ್ಲಿ ಹಾಳಾಗದಂತೆ ನೋಡಿಕೊಳ್ಳಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸುವ ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಆಹಾರ ಸರಬರಾಜು, ಆಹಾರ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಯೋಜನಾ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಇಲಾಖೆಯ ಕಾರ್ಯದರ್ಶಿಗಳಾದ ಮನೋಜ್ ಜೈನ್ ಅವರು ಮಾತನಾಡಿ ಇಲಾಖೆಯಲ್ಲಿ ಖಾಲಿ ಇರುವ ಹ್ದುೆಗಳಿಗೆ ಇಲಾಖೆಯ ಇತರ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ನೀಡಿ, ಖಾಲಿ ಇರುವ ಆಹಾರ ನಿರೀಕ್ಷಕರ ಹ್ದುೆಗಳಿಗೆ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರಿಗೆ ಪ್ರಭಾರ ನೀಡುವಂತೆ ಸೂಚನೆ ನೀಡಿದರು.
ಬೇರೆ ರಾಜ್ಯದ ಜನರು ಇದ್ದರೆ ಅವರ ಆಧಾರ್ ಕಾರ್ಡ್ ಪರಿಶೀಲಿಸಿ, ಚಾಮರಾಜನಗರ ಜಿಲ್ಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ 10 ರಿಂದ 15 ಮನೆಗಳು ಇರುವ ಕಡೆಗೆ ಅಲ್ಲಿಗೆ ಪಡಿತರ ತಲುಪಿಸಬೇಕು ಎಂದರು.ಈ ಕೆವೈಸಿ ಮಾಡಿಸದ ಸದಸ್ಯರ ಆಹಾರ ಪದಾರ್ಥಗಳನ್ನು ನಿಲ್ಲಿಸಲಾಗುವುದು ಎಂದು ರೇಷನ್ ಅಂಗಡಿಯವರ ಮೂಲಕ ಮಾಹಿತಿ ನೀಡಬೇಕು. ಮಾಹಿತಿ ನೀಡಿದ್ದಕ್ಕೆ ಸದಸ್ಯರಿಂದ ಸಹಿ ಪಡೆಯಬೇಕು ಎಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಾದ ವಾಸಿರೆಡ್ಡಿ ವಿಜಯ್ ಜ್ಯೋತ್ಸ್ನಾ ಮಾತನಾಡಿ, ಇದುವರೆಗೆ 1.69 ಲಕ್ಷ ಜನರು ಈ ಕೆವೈಸಿ ಮಾಡಿಸಿಲ್ಲ. ಸಿಂಗಲ್ ಮೆಂಬರ್ ಕಾರ್ಡ್ ಗಳಿಗೆ ಈ ಕೆವೈಸಿ ಮಾಡಿಸಲು ಸ್ವಲ್ಪ ಅವಕಾಶ ನೀಡಬೇಕು. 4 ರಿಂದ 5 ಜನರಿರುವ ಕಾರ್ಡ್ಗಳ ಸದಸ್ಯರು ಈ ಕೆವೈಸಿ ಮಾಡಿಸದೆ ಇದ್ದರೆ ಈ ಕೆವೈಸಿ ಮಾಡಿಸದ ಸದಸ್ಯರ ಪಡಿತರ ನಿಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕರಾದ ಎಂ ಎಸ್ ಎನ್ ಬಾಬು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಾದ ಜಗದೀಶ್ ಎಂ ಕೆ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
- ತುಮಕೂರಿನಲ್ಲಿ ತ್ಯಾಜ್ಯ ಸಂಗ್ರಹಣೆಗೆ ಸ್ವಿಗ್ಗಿ, ಜುಮೊಟೊ, ಬಿಂಕ್ಲಿಟ್ ಮಾದರಿಯ ಹೊಸ ಯೋಜನೆ
- ಎಲ್ಲಾ ಪಕ್ಷಗಳ ಶಾಸಕರಿಗೂ ಸಮಾನ ಅನುದಾನ ನೀಡದಿದ್ದರೆ ಉಗ್ರ ಹೋರಾಟ : ಸಿ.ಬಿ.ಸುರೇಶ್ಬಾಬು ಎಚ್ಚರಿಕೆ
- ಬೆಂಗಳೂರು ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಜಪ್ತಿ
- ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಸೂಚನೆ
- ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ತ್ರಿಪುರ ರಾಜ್ಯದ ವ್ಯಕ್ತಿ ಅಂದರ್