Wednesday, June 11, 2025
Homeರಾಜ್ಯವಿಧಾನಸೌಧದಲ್ಲಿ ವಿಐಪಿಗಳಿಗಾಗಿ ಆರ್‌ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು : ನಿಖಿಲ್ ಆರೋಪ

ವಿಧಾನಸೌಧದಲ್ಲಿ ವಿಐಪಿಗಳಿಗಾಗಿ ಆರ್‌ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು : ನಿಖಿಲ್ ಆರೋಪ

RCB victory celebration was organized for VIPs in Vidhana Soudha: Nikhil

ಬೆಂಗಳೂರು, ಜೂ.10- ಆರ್‌ಸಿಬಿ ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತು ಜನಸಾಮಾನ್ಯರನ್ನಲ್ಲ. 11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬದವರು ಸೆಲ್ಪಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು ಎಂದು ಆರೋಪಿಸಿದ್ದಾರೆ.

ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ ಎಂಬುದು ಮುಖ್ಯಮಂತ್ರಿಗಳ ಪ್ರತಿಕ್ರಿಯೆಯಾಗಿದೆ. ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದು ನಿಮ್ಮ ರಾಜ್ಯ, ನಿಮ್ಮ ನಗರ. ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು, ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ.

ಫೋಟೋ-ಶೋ ಗಳಿಗಾಗಿ ನಿಮ್ಮನ್ನು ನೇಮಿಸಲಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News