Tuesday, July 2, 2024
Homeಮನರಂಜನೆರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ

ಬೆಂಗಳೂರು,ಜೂ.17- ಕನ್ನಡಕ ಚಿತ್ರರಂಗವನ್ನೇ ದಂಗುಬಡಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ರಿಯಲ್‌ ಸ್ಟಾರ್‌ ಉಪೇಂದ್ರ ಮಧ್ಯಪ್ರವೇಶ ಮಾಡಿದ್ದು, ವಿಚಾರಣೆಗೆ ವಿಡಿಯೋ ಹಾಗೂ ಸಾಕ್ಷಿಗಳನ್ನು ಹಂಚಿಕೊಳ್ಳಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ.

ಭಾನುವಾರವಷ್ಟೇ ಮತ್ತೋರ್ವ ನಟ ಕಿಚ್ಚ ಸುದೀಪ ಅವರು ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆಂದು ಹೇಳಿದ ಬೆನ್ನಲ್ಲೇ ಇದೀಗ ಉಪೇಂದ್ರ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಸುದೀರ್ಘವಾದ ಪೋಸ್ಟ್‌ ಮಾಡಿರುವ ಉಪೇಂದ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್‌ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈಪ್ರೊಫೈಲ್‌ ಕೇಸ್‌‍ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

ರೇಣುಕಾಸ್ವಾಮಿ ಕುಟುಂಬದಲ್ಲಿ ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್‌ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ.

ಏಕೆಂದರೆ ಯಾವುದೇ ಕೇಸ್‌‍ ಆದರೂ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಮಾಡಬಹುದು ) ಎಂದು ಹೇಳಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್‌‍ ಆಗಿದ್ದರೆ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್‌ ಅಭಿಮಾನಿಗಳಿಗೆ ಮನಸಿನಲ್ಲಿ ಪೋಲೀಸ್‌‍ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ.

ಸುದೀಪ್‌ ಮಾತನಾಡಿದ್ದೇನು?:
ನಟ ಕಿಚ್ಚ ಸುದೀಪ್‌ ಅವರು ರೇಣುಕಾಸ್ವಾಮಿ ಕೊಲೆ ಬಗ್ಗೆ ಮಾತನಾಡಿದ್ದು, ರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗಬೇಕು. ಹುಟ್ಟುವ ಮಗುವಿಗೆ ಜೀವನ ಸಿಗಬೇಕು. ಚಿತ್ರರಂಗಕ್ಕೆ ಕಪ್ಪುಚುಕ್ಕೆ ಬರುವುದು ಬೇಡ. ನಾನು ಯಾರ ಪರ ವಿರೋಧವೂ ಮಾತನಾಡೋದುವುದಿಲ್ಲ. ಒಬ್ಬರಿಂದ ಚಿತ್ರರಂಗ ಇಲ್ಲ, ಎಲ್ಲರಿಂದ ಚಿತ್ರರಂಗ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಕೆಲ ಕಲಾವಿದರು ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

RELATED ARTICLES

Latest News