Tuesday, September 17, 2024
Homeರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!

ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.!

ಬೆಂಗಳೂರು, ಆ.21- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಮುಂದಿನ ತಿಂಗಳ ಮೊದಲ ವಾರದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಲಿದ್ದಾರೆ.ವಿಜಯನಗರದ ಉಪ ವಿಭಾಗದ ಪೊಲೀಸರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. ಅಲ್ಲದೆ, ಹೈದರಾಬಾದ್ಗೆ ಕಳುಹಿ ಸಿದ್ದ ವಸ್ತುಗಳಲ್ಲಿ ಶೇ.70ರಷ್ಟು ವರದಿಗಳು ಬಂದಿವೆ. ಉಳಿದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಈಗಾಗಲೇ ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿ ದ್ದಾರೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.

RELATED ARTICLES

Latest News