ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ರೇಣುಕಾಸ್ವಾಮಿ ಕುಟುಂಬ ಪಟ್ಟು

ಬೆಂಗಳೂರು,ಜೂ.13- ನಟ ದರ್ಶನ್‌ ಪ್ರಕರಣದಲ್ಲಿ ರಾಜ್ಯದ ಪೊಲೀಸರಿಂದ ನ್ಯಾಯ ಸಿಗುವ ಅನುಮಾನಗಳಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ಪಟ್ಟು ಹಿಡಿದಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಠಾಣೆಯ ಸುತ್ತ ಟೆಂಟ್‌ ಹಾಕಿಕೊಂಡು ದರ್ಶನ್‌ ಅವರನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದ್ದಾರೆ. ವಿಚಾರಣಾಧೀನ ಆರೋಪಿಗಳಿಗೆ ಬಿರಿಯಾನಿ ಸೇರಿದಂತೆ ಭಕ್ಷ್ಯ ಭೋಜನದ ಆತಿಥ್ಯ ನೀಡಲಾಗುತ್ತಿದೆ. ಹೀಗಿರುವಾಗ ತನಿಖೆಯಲ್ಲಿ ನ್ಯಾಯ ಸಿಗುವ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ನಿನ್ನೆ ವೀರಶೈವ … Continue reading ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ರೇಣುಕಾಸ್ವಾಮಿ ಕುಟುಂಬ ಪಟ್ಟು