ಬೆಂಗಳೂರು,ಜೂ.23- ನಿರಂತರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್ಸ್ ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಕೊಡಗು, ಚಿಕ್ಕಮಗಳೂರು, ಕೇರಳ ಭಾಗದಲ್ಲಿ ಮುಂಗಾರು ಮಳೆ ವ್ಯಾಪಕ ಪ್ರಮಾಣದಲ್ಲಿ ಬೀಳುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಅದೇ ರೀತಿ ಜಲಾಶಯದ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, 49.45 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯದಲ್ಲಿ 43.30 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಶೇ.88ರಷ್ಟು ಈಗಾಗಲೇ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ 14.57 ಅಡಿಯಷ್ಟು ಮಾತ್ರ ನೀರು ಸಂಗ್ರಹವಾಗಿತ್ತು. ಜೂನ್ ತಿಂಗಳಿನಲ್ಲೇ ಕಾವೇರಿ ಕೊಳ್ಳದ ಜಲಾಶಯಗಳು ಭರ್ತಿಯಾಗುವ ಸಾಧ್ಯತೆಗಳಿದ್ದು, ಕುಡಿಯುವ ನೀರು ಹಾಗೂ ರೈತರ ಬೆಳೆಗಳಿಗೆ ನೀರಿನ ಸಮಸ್ಯೆ ನಿವಾರಣೆಯಾದಂತಾಗಿದೆ.
ಕಾವೇರಿ ಜಲಾನಯನ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ನಿರಂತರವಾಗಿದೆ.
ಹಾರಂಗಿ ಜಲಾಶಯ ಶೇ.74, ಹೇಮಾವತಿ ಶೇ.83, ಕಬಿನಿ ಜಲಾಶಯ ಶೇ.81ರಷ್ಟು ಭರ್ತಿಯಾಗಿದ್ದು, ಒಟ್ಟಾರೆ ನಾಲ್ಕೂ ಜಲಾಶಯಗಳಲ್ಲಿ ಶೇ.84ರಷ್ಟು ನೀರಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದುಪ್ಪಟ್ಟು ನೀರಿನ ಸಂಗ್ರಹವಿದೆ. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ, ಸೂಫ ಜಲಾಶಯಗಳಿಗೂ ಒಳಹರಿವು ಹೆಚ್ಚಾಗಿದೆ. ಈ ಮೂರು ಜಲಾಶಯ ಗಳಿಂದ 38 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಯುತ್ತಿದ್ದು, ಒಟ್ಟಾರೆ ಶೇ.31ರಷ್ಟು ಭರ್ತಿ ಯಾಗಿವೆ.
ಕೃಷ್ಣ ಕೊಳ್ಳದ ಭದ್ರ, ತುಂಗಭದ್ರ, ಘಟ್ಟಪ್ರಭ, ಹಾಲಮಟ್ಟಿ, ನಾರಾಯಣಪುರ ಜಲಾಶಯಗಳಿಗೂ ಸಾಕಷ್ಟು ಒಳಹರಿವಿದೆ. ಈ ಜಲಾಶಯಗಳಲ್ಲಿ ಒಟ್ಟಾರೆ ಶೇ.51ರಷ್ಟು ನೀರು ಸಂಗ್ರವಾಗಿದ್ದು, ಒಳಹರಿವುಸು 1,45,000 ಕ್ಯೂಸೆಕ್ಗೂ ಹೆಚ್ಚಿದೆ.
ಆಲಮಟ್ಟಿ ಜಲಾಶಯ ಶೇ.61ರಷ್ಟು , ನಾರಾಯಣಪುರ ಜಲಾಶಯ ಶೇ.78ರಷ್ಟು ಭರ್ತಿಯಾಗಿವೆ. ಆಲಮಟ್ಟಿ ಜಲಾಶಯಕ್ಕೆ 98 ಸಾವಿರಕ್ಕೂ ಹೆಚ್ಚು ಒಳಹರಿವಿದ್ದು, 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯಕ್ಕೆ 51 ಸಾವಿರಕ್ಕೂ ಹೆಚ್ಚು ನೀರು ಹರಿದುಬರುತ್ತಿದ್ದು, 44 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
- ಬಂಜೆತನ ಸಮಸ್ಯೆಗಳಿಗೆ ಉಚಿತ ಮಾರ್ಗದರ್ಶನ ನೀಡಲು ಬಂತು ಟೋಲ್-ಫ್ರೀ ಸಂಖ್ಯೆ
- ರಾಜ್ಯದಲ್ಲಿ ಶೀಘ್ರವೇ ಜಲಾಶಯಗಳು ಭರ್ತಿ.!
- ಇರಾನ್-ಇಸ್ರೇಲ್ ಯುದ್ಧಕ್ಕೆ ಅಮೆರಿಕ ರಂಗಪ್ರವೇಶ ಬೆನ್ನಲ್ಲೇ ಜಾಗತಿಕ ಷೇರು ಮಾರುಕಟ್ಟೆ ತಲ್ಲಣ
- ಶಾಸಕರ ಅಸಮಾಧಾನ ಬಗೆಹರಿಸುವೆ:ಸಿಎಂ
- ಗುಜರಾತ್ ವಿಧಾನಸಭೆಉಪಚುನಾವಣೆ ಫಲಿತಾಂಶ : ಬಿಜೆಪಿ,ಎಎಪಿ ಸಮಬಲ