Friday, October 17, 2025
Homeಬೆಂಗಳೂರುಬೆಂಗಳೂರು : ಲಾಂಗ್‌ ತೋರಿಸಿ ಸರ ಅಪಹರಣ ಮಾಡಿದ್ದ ದರೋಡೆಕೋರ ಸೆರೆ

ಬೆಂಗಳೂರು : ಲಾಂಗ್‌ ತೋರಿಸಿ ಸರ ಅಪಹರಣ ಮಾಡಿದ್ದ ದರೋಡೆಕೋರ ಸೆರೆ

Robber who threaten with Weapons and robbed women's chain arrested

ಬೆಂಗಳೂರು,ಅ.17- ಲಾಂಗ್‌ನಿಂದ ಬೆದರಿಸಿ ಸರ ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ದರೋಡೆಕೋರನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾಸಿಂಗನಹಳ್ಳಿ ನಿವಾಸಿ ಯೋಗಾನಂದ (35) ಬಂಧಿತ ದರೋಡೆಕೋರ.

ಬ್ಯಾಟರಾಯನಪುರ ಪೊಲೀಸ್‌‍ ಠಾಣೆಯ ರೌಡಿ ಶೀಟರ್‌ ಆಗಿರುವ ಈತನ ಮೇಲೆ ವಿವಿಧ ಪೊಲೀಸ್‌‍ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿವೆ.ಕೋಡಿಪಾಳ್ಯದಲ್ಲಿ ವಾಸವಾಗಿದ್ದುಕೊಂಡು ತನ್ನ ಸಹಚರನೊಂದಿಗೆ ಬೈಕ್‌ನಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಹಿಂಬಾಲಿಸಿಕೊಂಡು ಹೋಗಿ ಲಾಂಗ್‌ನಿಂದ ಬೆದರಿಸಿ ಸರ ಅಪಹರಣ, ದರೋಡೆ ಮಾಡಿ ಪರಾರಿಯಾಗುತ್ತಿದ್ದನು.

ಗಿರಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಅಪಹರಣ ಪ್ರಕರಣದಲ್ಲಿ ಆರೋಪಿ ಯೋಗಾನಂದನನ್ನು ಬಂಧಿಸಿದ್ದಾರೆ. ಕೋಣನಕುಂಟೆ, ಕೆ.ಎಸ್‌‍ ಲೇಔಟ್‌, ಗಿರಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 6.54 ಲಕ್ಷ ರೂ. ಮೌಲ್ಯದ 75.62 ಗ್ರಾಂ ಚಿನ್ನಾಭರಣವನ್ನು ಹಾಗೂ ಬೈಕ್‌ ವಶಪಡಿಸಿಕೊಂಡಿ ದ್ದಾರೆ. ಈಗಾಗಲೇ ಈತನ ಸಹಚರನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

RELATED ARTICLES

Latest News