Thursday, May 2, 2024
Homeರಾಜ್ಯಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್

ಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ, ಏ.19- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ ಸಚಿವ ಸಂತೋಷ್ಲಾಡ್ ಹೇಳಿದರು. ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಎನ್ಕೌಂಟರ್ ಬಗ್ಗೆ ಹಲವು ಮುಖಂಡರು ಮಾತನಾಡಿದ್ದಾರೆ. ನಾನು ಏನು ಹೇಳುವುದಿಲ್ಲ. ಆದರೆ ಮುಂದೆ ಇದಕ್ಕೆ ಒಂದು ಕಾನೂನು ಬರಲೇಬೇಕು ಎಂದರು.

ಡ್ರಗ್ಸ್ ಮಾಫಿಯಾ ಬಹಳ ದಿನದಿಂದ ಇದೆ. ಡ್ರಗ್ಸ್ ಬೇರೆ ಬೇರೆ ಕಡೆಯಿಂದ ಬರುತ್ತದೆ. ಇದು ಕೇವಲ ರಾಜ್ಯದ ಸಮಸ್ಯೆಯಲ್ಲ. ಈಗ ಆಗಿರುವ ಘಟನೆಗೆ ಅದಕ್ಕೂ ಹೋಲಿಕೆ ಬೇಡ ಎಂದು ಹೇಳಿದರು. ಎನ್ಕೌಂಟರ್ ಕಾನೂನು ಜಾರಿಗೊಳಿಸಿದರೆÉ ಈ ರೀತಿ ಮಾಡುವವರನ್ನು ಹೊಡೆದು ಉರುಳಿಸಬಹುದು ಎಂದರು.

ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಸರ್ಕಾರಗಳ ಅವ„ಯಲ್ಲಿ ಘಟನೆಗಳ ಸಂಖ್ಯೆಗಳನ್ನು ಕೊಡಬಲ್ಲೆ, ಆದರೆ ಅದಕ್ಕೆ ಉತ್ತರಿಸುವ ಪರಿಸ್ಥಿತಿ ಇದಲ್ಲ. ಕೆಲವರು ಇದನ್ನ ರಾಜಕೀಯ ಮಾಡಲು ಹೊರಟಿದ್ದಾರೆ. ಅವರಿಗೆ ಏನು ಅಂತಾ ಹೇಳಲಿ, ಇಂತಹ ಸೂಕ್ಷ್ಮ ವಿಷಯಗಳಲ್ಲಿ ರಾಜಕೀಯಗೊಳಿಸದೇ ಸೂಕ್ಷ್ಮತೆ, ಸ್ವಯಂತೆ ಕಾಯ್ದುಕೊಳ್ಳಬೇಕು ಬಿಜೆಪಿಗರಿಗೆ ಕಿವಿ ಮಾತು ಹೇಳಿದರು.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 13.30 ಲಕ್ಷ ಯುವತಿಯರು ಮಹಿಳೆಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಜೋಶಿ ಉತ್ತರಿಸಿಲಿ. ಹುಬ್ಬಳ್ಳಿ ಘಟನೆ ರಾಜಕೀಕರಣಗೊಳಿಸುತ್ತಿರುವ ಬಿಜೆಪಿಯವರು, ಬೆಂಗಳೂರು ಘಟನೆ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ. ಘಟನೆಯನ್ನು ಬೇರೆ ಆಯಾಮದಲ್ಲಿ ನೋಡಬಾರದು.

ತನಿಖೆ ಮುಗಿಯದೇ ರಾಜಕೀಯ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಅ„ಕಾರ ಇರುವ ರಾಜ್ಯದಲ್ಲಿ ಇಂತಹ ಘಟನೆ ನಡೆದಿಲ್ಲವೇ, ಅಂಕಿ ಸಂಖ್ಯೆ ಕೊಡಲೇ ಎಂದು ತಿರುಗೇಟು ನೀಡಿದರು. ತನಿಖೆ ಬಗ್ಗೆ ಈಗ ಮಾತನಾಡುವುದಿಲ್ಲ ಎಂದರು.ಘಟನೆ ಆಕಸ್ಮಿಕ ಎಂಬ ಗೃಹಸಚಿವರ ಹೇಳಿಕೆಯನ್ನು ಸಚಿವ ಲಾಡ್ ಸಮರ್ಥಿಸಿಕೊಂಡರು.

RELATED ARTICLES

Latest News