ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂ ವರ್ಗಾವಣೆಗೆ ಮುಂದಾಗಿದ್ದ ಸುಪ್ರೀಂ ಕೊಲಿಜಿಯಂ

ನವದೆಹಲಿ,ಸೆ.27– ಬೆಂಗಳೂರಿನ ಪ್ರದೇಶವೊಂದನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದಲ್ಲದೆ, ಸುಪ್ರೀಂ ಕೋರ್ಟ್‌ನ ಅಸಮಾಧಾನಕ್ಕೆ ಕಾರಣರಾದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರನ್ನು ವರ್ಗಾವಣೆ ಮಾಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಮುಂದಾಗಿತ್ತು ಎಂಬುದು ಇದೀಗ ಬೆಳಕಿಗೆ ಬಂದಿದೆ. ನ್ಯಾಯಮೂರ್ತಿ ಶ್ರೀಶಾನಂದ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂಕೋರ್ಟ್‌, ಐವರು ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಸಿತ್ತು. ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ … Continue reading ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂ ವರ್ಗಾವಣೆಗೆ ಮುಂದಾಗಿದ್ದ ಸುಪ್ರೀಂ ಕೊಲಿಜಿಯಂ