ತುಮಕೂರು, ಸೆ.12- ಹೋಂ ಗಾರ್ಡ್ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರುಕುಳ ನೀಡುತ್ತಿರುವ ಆರೋಪ ಮಾಡಿ ಹೋಂ ಗಾರ್ಡ್ ಒಬ್ಬರು ಆಲದ ಮರ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ತುಮಕೂರಿನ ಕ್ಯಾತ್ಸಂದ್ರ ಬಳಿ ಇರುವ ಗೃಹರಕ್ಷಕ ದಳದ ಕಚೇರಿಯ ಆವರಣದಲ್ಲಿ ಕೊರಟಗೆರೆ ಮೂಲದ ಜಯಣ್ಣ ಎಂಬುವರು ಬೆಳ್ಳಂ ಬೆಳಗೆ ಕಚೇರಿ ಆವರಣದಲ್ಲಿದ್ದ ಆಲದ ಮರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಕಚೇರಿಯ ಹಿರಿಯ ಅಧಿಕಾರಿ ಕಾರಣ ಎಂದು ಫೇಸ್ಬುಕ್ ಹಾಗೂ ವಾಟ್ಸಪ್ ಮೂಲಕ ಸ್ನೇಹಿತರಿಗೆ ಸಂದೇಶ ರವಾನಿಸಿದ್ದಾರೆ.
ಯಶಸ್ವಿ ಜಿ-20 : ಭಾರತದ ಆರ್ಥಿಕ ಕಾರಿಡಾರನ್ನು ಕೊಂಡಾಡಿದ ಹಲವು ರಾಷ್ಟ್ರಗಳು
ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜಯಣ್ಣ ಅವರ ಮನವೊಲಿಸಿ ಮರದಿಂದ ಕೆಳಗಿಳಿಸಿ ಕರೆದೊಯ್ದಿದ್ದಾರೆ. ಈ ಬಗ್ಗೆ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
#Harassment, #seniorofficers, #homeguard, #commitsuicide,