Friday, May 17, 2024
Homeರಾಜ್ಯಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ : ಗೃಹಸಚಿವ ಪರಮೇಶ್ವರ್

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ : ಗೃಹಸಚಿವ ಪರಮೇಶ್ವರ್

ಬೆಂಗಳೂರು,ಫೆ.21-ಕೇರಳದ ಮಾದರಿಯಲ್ಲಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ಭರವಸೆ ನೀಡಿದರು. ವಿಧಾನಸಭೆಯ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಆರತಿ ಕೃಷ್ಣ ಅವರ ನೇತೃತ್ವದಲ್ಲಿ 15ಕ್ಕೂ ಹೆಚ್ಚು ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪಗಳನ್ನು ವೀಕ್ಷಿಸುತ್ತಿರುವ ವಿಚಾರವನ್ನು ಸ್ವಾಗತಿಸಿ ಅವರು ಮಾತನಾಡಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆ ಸಿದ್ದಪಡಿಸುವಾಗ ಪ್ರತ್ಯೇಕ ಸಚಿವಾಲಯವನ್ನು ಮಾಡುವ ಬೇಡಿಕೆಯನ್ನು ಅನಿವಾಸಿ ಭಾರತೀಯರು ಇಟ್ಟಿದ್ದರು. ಅದರಂತೆ ಪ್ರಣಾಳಿಕೆಯಲ್ಲೂ ಆ ವಿಚಾರವನ್ನು ಸೇರಿಸಿದ್ದೆವು. ಅವರದೇ ಆದ ಸಮಸ್ಯೆಗಳಿರುತ್ತವೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತ್ಯೇಕ ಸಚಿವಾಲಯ ಮಾಡುತ್ತೇವೆ ಎಂದರು. ಕಾನೂನಾತ್ಮಕವಾಗಿ ಅವರಿಗೆ ಅಗತ್ಯವಿರುವ ಸಹಾಯ ಮಾಡುತ್ತೇವೆ. ಕಲ್ಯಾಣ ಕೆಲಸಗಳನ್ನು ಮಾಡುತ್ತೇವೆ ಎಂದು ಹೇಳಿದರು.

ಕೆನಡಾ, ಯುಕೆ, ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಲಾಪ ವೀಕ್ಷಿಸುತ್ತಿದ್ದಾರೆ. ಅವರನ್ನು ಸ್ವಾಗತಿಸುತ್ತೇನೆ ಎಂದರು. ಉದ್ಯೋಗಹರಿಸಿಕೊಂಡು ಬೇರೆ ಬೇರೆ ದೇಶಗಳಲ್ಲಿ ಉದ್ಯೋಗವನ್ನು ಕಟ್ಟಿಕೊಂಡಿದ್ದಾರೆ. ಅನೇಕರು ಉದ್ಯಮಿಗಳಾಗಿ ಯಶಸ್ವಿಯಾಗಿದ್ದಾರೆ. ಶೇ.60ರಿಂದ 80ರಷ್ಟು ಅನಿವಾಸಿ ಭಾರತೀಯರು ಹೊರ ರಾಷ್ಟ್ರದಲ್ಲಿ ಗಳಿಸಿದ ಆದಾಯವನ್ನು ಭಾರತಕ್ಕೆ ಮರಳಿ ತರುವ ಮನಸ್ಸು ಮಾಡಿದ್ದಾರೆ. ಹೊರ ದೇಶಕ್ಕೆ ಹೋದರೆ ಮರಳಿ ಬರುವುದಿಲ್ಲ ಎಂಬ ಪರಿಸ್ಥಿತಿ ಈಗಿಲ್ಲ. ಸಾಕಷ್ಟು ಬದಲಾಗಿದೆ. ಇಲ್ಲಿ ಸಿಎಸ್‍ಆರ್ ನಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಿದ್ದಾರೆ.

ರಾಜ್ಯ ಸರ್ಕಾರ ಅನಿವಾಸಿ ಭಾರತೀಯರ ಸಮಿತಿಯನ್ನು ರಚಿಸಿದ್ದು, ಉಪಾಧ್ಯಕ್ಷರಾಗಿ ಆರತಿ ಕೃಷ್ಣ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು, ವಿಧಾನಸಭೆಯ ಕಾರ್ಯಕಲಾಪವನ್ನು ನಮ್ಮ ವಿಶೇಷ ಅತಿಥಿಗಳಾಗಿ ರೈತರು, ಪೌರಕಾರ್ಮಿಕರು, ವಿಶೇಷ ಚೇತನರು, ತೃತೀಯ ಲಿಂಗಿಗಳು ವೀಕ್ಷಣೆ ಮಾಡುತ್ತಿದ್ದಾರೆ.

ಇಂದು ಸಭಾಧ್ಯಕ್ಷರ ಗ್ಯಾಲರಿಯಲ್ಲಿ 15 ವಿವಿಧ ರಾಷ್ಟ್ರಗಳಲ್ಲಿರುವ ಅನಿವಾಸಿ ಕನ್ನಡಿಗರು ವೀಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಎಲ್ಲ ಶಾಸಕರು ಸರ್ಕಾರದ ಪರವಾಗಿ ಸ್ವಾಗತಿಸುವುದಾಗಿ ಹೇಳಿದರು. ವ್ಯಾಪಾರ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ವಿದೇಶಕ್ಕೆ ತೆರಳಿ ಅಲ್ಲಿ ನೆಲೆಸಿರುವ ಕನ್ನಡಿಗರು, ನಮ್ಮ ಸಂಸ್ಕøತಿ, ಆಚಾರ, ವಿಚಾರವನ್ನು ಮರೆಯದೆ ಆಯಾ ರಾಷ್ಟ್ರಗಳಲ್ಲಿ ಗಳಿಸಿದ ಆದಾಯದ ಒಂದು ಪಾಲನ್ನು ನಮ್ಮ ಸಮಾಜದ ಅಭಿವೃದ್ಧಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ನೀಡುವಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಯಲ್ಲಿ ಅವರು ಪರೋಕ್ಷವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದರು.

“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..”

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅನಿವಾಸಿ ಭಾರತೀಯ ಕನ್ನಡಿಗರು ಅವೇಶನ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯವರು ಅತಿ ಹೆಚ್ಚು ವಿದೇಶದಲ್ಲಿ ನೆಲೆಸಿದ್ದು, ಅಲ್ಲಿ ತಮ್ಮದೇ ಆದ ಸಂಘಗಳನ್ನು ಕಟ್ಟಿಕೊಂಡಿದ್ದಾರೆ. ಆದರೂ ತಮ್ಮ ಊರಿನ ಸಂಪ್ರದಾಯ, ಸಂಬಂಧವನ್ನು ಮರೆತಿಲ್ಲ. ಎಲ್ಲ ಜಾತಿ ಧರ್ಮೀಯರು ಹೋಗಿದ್ದಾರೆ. ಅವರೊಂದಿಗೆ ಸಂಬಂಧವನ್ನು ಇನ್ನಷ್ಟು ಗಟ್ಟಿ ಮಾಡಬೇಕು. ನಮ್ಮಲ್ಲಿನ ಹೂಡಿಕೆಯಲ್ಲೂ ಸಹಕಾರಿಯಾಗಲಿದೆ. ರಾಜಕೀಯ, ಸಾಮಾಜಿಕ, ಕೈಗಾರಿಕಾ ವಲಯದಲ್ಲೂ ದೊಡ್ಡ ಮಟ್ಟದಲ್ಲಿ ಹೊರದೇಶದಲ್ಲಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಬಹಳ ಹಿಂದಿನಿಂದಲೂ ವಿದೇಶಗಳಿಗೆ ಹೋಗುವ ಪರಿಪಾಠವಿದೆ. ಜಗತ್ತಿನ ಎಲ್ಲೆಡೆ ಭಾರತೀಯ ಸಂಸ್ಕøತಿಯ ಕುರುಹುಗಳಿವೆ. ಅನಿವಾಸಿ ಭಾರತೀಯರು ತವರಿಗೆ ಹೆಮ್ಮೆ ತರುವ ಕೆಲಸವನ್ನು ಮಾಡಿದ್ದಾರೆ. ಅವರೊಂದಿಗೆ ಹೆಚ್ಚು ಸಂಪರ್ಕ ಹೊಂದುವುದರಿಂದ ರಾಜ್ಯದ ಅಭಿವೃದ್ದಿಗೂ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರಮೋದಿ ಅವರು ದೇಶ ಮುನ್ನಡೆಸುವ ರೀತಿ ಭಾರತೀಯರು ವಿದೇಶಗಳಲ್ಲೂ ಹೆಮ್ಮೆ ಪಡುವಂತಾಗಿದೆ ಎಂದು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ಶಾಸಕರಾದ ಎನ್.ಎ.ಹ್ಯಾರೀಸ್, ಡಾ.ರಂಗನಾಥ್ ಅವರುಗಳು, ಅನಿವಾಸಿ ಭಾರತೀಯರ ಸೇವೆಯನ್ನು ಗುಣಗಾನ ಮಾಡಿ ಸದನ ವೀಕ್ಷಿಸುತ್ತಿರುವುದನ್ನು ಪಕ್ಷಬೇಧ ಮರೆತು ಶ್ಲಾಘಿಸಿದರು.

RELATED ARTICLES

Latest News