ಲಕ್ನೋ,ಮೇ.29- ಹಾಪುರ್ ಕೊಟ್ವಾಲಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ದೆಹಲಿ ಪೊಲೀಸರ ಜಂಟಿ ತಂಡವು ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ಶೂಟರ್ನನ್ನು ಗುಂಡಿಕ್ಕಿ ಕೊಂದಿದೆ. ಮೃತನನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದೆ.
ಕೊಲೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಕಳೆದ ರಾತ್ರಿ, ಎಸ್ಟಿಎಫ್ನ ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡವು ಹಾಪುರ್ ಕೊಟ್ವಾಲಿ ಪ್ರದೇಶದಲ್ಲಿ ಗುಂಡಿನ ಚಕಮಕಿಯಲ್ಲಿ ತೊಡಗಿದೆ ಎಂದು ಎಡಿಜಿಪಿ ಅಮಿತಾಭ್ ಯಶ್ ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ನವೀನ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಜಿಯಾಬಾದ್ ಜಿಲ್ಲೆಯ ಲೋನಿ ನಿವಾಸಿ ಆರೋಪಿ ಕುಮಾರ್ ಲಾರೆನ್್ಸಬಿಷ್ಣೋಯ್ ಗ್ಯಾಂಗ್ನ ಸಕ್ರಿಯ ಶಾರ್ಪ್ಶೂಟರ್ ಆಗಿದ್ದು, ಗ್ಯಾಂಗ್ ಸದಸ್ಯ ಹಾಶಿಮ್ ಬಾಬಾ ಜೊತೆ ನಿಕಟವಾಗಿ ಕೆಲಸ ಮಾಡುತ್ತಿದ್ದರು ಎಂದು ಎಡಿಜಿಪಿ ತಿಳಿಸಿದ್ದಾರೆ.ಕುಮಾರ್ ವಿರುದ್ಧ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಕೊಲೆ, ಕೊಲೆ ಯತ್ನ, ಅಪಹರಣ, ದರೋಡೆ ಮತ್ತು ಅಡಿಯಲ್ಲಿ 20 ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.