ಬೆಂಗಳೂರು,ಮಾ.6- ಕಾರ್ಮಿಕ ಇಲಾಖೆಯ ಶ್ರಮಿಕ್ ನಿವಾಸ್ ಎಂಬ ಮಹತ್ವಾಕಾಂಕ್ಷಿ ಯೋಜನೆ ಶೀಘ್ರವೇ ಜಾರಿಯಾಗಲಿದೆ. ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ಶ್ರಮಿಕ್ ನಿವಾಸ್ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡಲು ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದೆ.
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ದೂರದೃಷ್ಟಿಯಿಂದಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ.
ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ-ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಲಭಿಸಲಿದೆ.
ದೇಶದ ಹೆಮ್ಮೆ INS ವಿಕ್ರಾಂತ್ನಲ್ಲಿ ನೌಕಾಪಡೆ ಕಮಾಂಡರ್ಗಳ ಸಭೆ
ಇನ್ನೂ ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದ್ದು, ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ಮೊದಲ ಹಂತದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಡಿ ಇರಿಸಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜÁರಿ ಮಾಡಲಾಗುತ್ತಿರುವ ಶ್ರಮಿಕ್ ನಿವಾಸ್ ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದೆ.
ಈ ವಸತಿ ಸಮುಚ್ಚಯಗಳನ್ನು ಇಲಾಖೆಯೇ ನಿರ್ವಹಿಸಲಿದ್ದು, ಕಾರ್ಮಿಕ ಮಂಡಳಿಯ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರಿಗೆ ಈ ವಸತಿ ಸೌಲಭ್ಯ ದೊರಕಲಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷ ಮತ್ತುಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ವಲಸೆ ಕಾರ್ಮಿಕರಿಗೆ ವಸತಿ ಬಹುದೊಡ್ಡ ಸಮಸ್ಯೆಯಾಗಿತ್ತು. ಮಲೀನ ಸ್ಥಳಗಳಲ್ಲಿ ನೆಲೆಯೂರುವ ಅನಿವಾರ್ಯತೆಯಿಂದ ಶ್ರಮಿಕವರ್ಗ ಮಾನಸಿಕವಾಗಿ ಹಿಂದುಳಿಯುವಂತೆ ಆಗಿತ್ತು.
ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ
ಕಾರ್ಮಿಕರಿಗೂ ಮೂಲಭೂತ ಸೌಕರ್ಯ ಒದಗಿಸಬೇಕೆಂಬ ಆಶಯದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ರಾಜ್ಯದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಶ್ರಮಿಕ ವರ್ಗಕ್ಕೆ ಮೂಲಸೌಕರ್ಯವಿರುವ ವಸತಿ ವ್ಯವಸ್ಥೆಗಾಗಿ ಶ್ರಮಿಕ್ ನಿವಾಸ್ ಜಾರಿ ಮಾಡಲಾಗುತ್ತಿದೆ. ನಮ್ಮ ಕನಸಿನ ಈ ಯೋಜನೆ ನನಸಾಗುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಶ್ರಮಿಕ್ ನಿವಾಸ್ ವಸತಿ ಸಮುಚ್ಚಯ ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ ಎಂದಿದ್ದಾರೆ.
Shramik Niwas, housing, complex, Labor Department,