Sunday, April 28, 2024
Homeಕ್ರೀಡಾ ಸುದ್ದಿಐಪಿಎಲ್ ಟೂರ್ನಿಯಿಂದ ಶ್ರೇಯಸ್ ಅಯ್ಯರ್ ಔಟ್, ಕೆಕೆಆರ್​ಗೆ ಆಘಾತ

ಐಪಿಎಲ್ ಟೂರ್ನಿಯಿಂದ ಶ್ರೇಯಸ್ ಅಯ್ಯರ್ ಔಟ್, ಕೆಕೆಆರ್​ಗೆ ಆಘಾತ

ಬೆಂಗಳೂರು, ಮಾ.14- ಬೆನ್ನು ನೋವಿನ ಸಮಸ್ಯೆಯಿಂದ 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಿಂದ ಸಂಪೂರ್ಣವಾಗಿ ಹೊರ ನಡೆದಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಈ ಬಾರಿಯ ವಿಶ್ವದ ಐಷಾರಾಮಿ ಟಿ20 ಕ್ರಿಕೆಟ್ ಲೀಗ್ನಿಂದ ಕೆಲ ಪಂದ್ಯಗಳಿಂದ ಹೊರಬೀಳುವ ಸಾಧ್ಯತೆಗಳಿವೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಫೈನಲ್ ಪಂದ್ಯದಲ್ಲಿ ಆಡುತ್ತಿರುವ ಶ್ರೇಯಸ್ ಅಯ್ಯರ್ ಅವರು 111 ಎಸೆತಗಳಲ್ಲಿ 95 ರನ್ ಗಳಿಸಿ ಮುಂಬೈ ತಂಡಕ್ಕೆ 537 ಬೃಹತ್ ರನ್ಗಳ ಮುನ್ನಡೆಗೆ ಕಾರಣವಾಗಿದ್ದರು. ಬ್ಯಾಟಿಂಗ್ನಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ 5ನೇ ದಿನದಾಟದ ಕ್ಷೇತ್ರ ರಕ್ಷಣೆಯಿಂದ ಸಂಪೂರ್ಣವಾಗಿ ವಿಶ್ರಾಂತಿ ಪಡೆದಿರುವುದರಿಂದ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಅನುಮಾನಗಳು ದಟ್ಟವಾಗಿ ಆವರಿಸಿದೆ.

`ಶ್ರೇಯಸ್ ಅಯ್ಯರ್ ಅವರು ಮತ್ತೆ ಗಾಯದ ಸಮಸ್ಯೆಗೆ ಒಳಗಾಗಿರುವುದು ಅಷ್ಟೊಂದು ಸಮಂಜಸವಾಗಿಲ್ಲ. ಅವರಿಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿರುವುದರಿಂದ ರಣಜಿ ಟ್ರೋಫಿ ಟೂರ್ನಿಯ 5ನೇ ದಿನದಾಟದಲ್ಲಿ ಕ್ಷೇತ್ರರಕ್ಷಣೆಯಲ್ಲಿ ಭಾಗಿಯಾಗಿಲ್ಲ. ಗಾಯದ ಸಮಸ್ಯೆಗೆ ಗಂಭೀರವಾಗಿರುವುದರಿಂದ ಅವರು ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ’ ಎಂದು ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ಸರಣಿಯ ಆರಂಭಿಕ ಎರಡು ಪಂದ್ಯಗಳ ನಂತರ ಬೆನ್ನು ನೋವಿನಿಂದಾಗಿ ಬೆಂಗಳೂರಿನ ಎನ್ಸಿಎಯಲ್ಲಿ ಪುನಶ್ಚೇತನದಲ್ಲಿ ತೊಡಗಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಅಕಾಡೆಮಿಯ ವೈದ್ಯಕೀಯ ತಂಡದ ಮುಖ್ಯಸ್ಥ ನಿತಿನ್ ಪಟೇಲ್ ಅವರು ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ನಂತರ ಅಯ್ಯರ್ ದೇಶಿ ಕ್ರಿಕೆಟ್ನಲ್ಲಿ ಪಾಲ್ಗೊಳ್ಳಬೇಕೆಂದು ಬಿಸಿಸಿಐ ನಿರ್ದೇಶನ ನೀಡಿತ್ತು.

ಆದರೆ ಬಿಸಿಸಿಐನ ಈ ಆದೇಶವನ್ನು ಕ್ಕರಿಸಿದ್ದ ಶ್ರೇಯಸ್ ಅಯ್ಯರ್ 2023-24 ವಾರ್ಷಿಕ ಒಪ್ಪಂದವನ್ನು ಕಳೆದುಕೊಂಡಿದ್ದರು. ನಂತರ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಶ್ರೇಯಸ್ ಅಯ್ಯರ್ ಅಖಾಡಕ್ಕಿಳಿದಿದ್ದರು. ಈಗ ಮತ್ತೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿರುವ ಶ್ರೇಯಸ್ ಅಯ್ಯರ್ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಗಳಿದ್ದು ಉಪನಾಯಕ ನಿತೀಶ್ ರಾಣಾ ಅವರೇ ಕೆಕೆಆರ್ ತಂಡವನ್ನು ಮುನ್ನಡೆಸುವ ಸಾಧ್ಯತೆಗಳಿವೆ.

RELATED ARTICLES

Latest News