Sunday, February 16, 2025
Homeಜಿಲ್ಲಾ ಸುದ್ದಿಗಳು | District Newsಗುಂಡು ಹಾರಿಸಿಕೊಂಡು ಎಸ್ಐ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಎಸ್ಐ ಆತ್ಮಹತ್ಯೆ

ಮಂಗಳೂರು, ಅ.22- ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನವ ಮಂಗಳೂರು ಬಂದರಿನಲ್ಲಿ ನಡೆದಿದೆ.

ರಾಯಚೂರು ಮೂಲದ ಝಾಕೀರ್ಹುಸೇನ್(58) ಆತ್ಮಹತ್ಯೆ ಮಾಡಿಕೊಂಡ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಬಂದರಿನ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಇವರು ಬೆಳಗ್ಗೆ 6.30ಕ್ಕೆ ಶೌಚಾಲಯಕ್ಕೆ ಹೋಗಿದ್ದರು ಅಲ್ಲಿ ತಮ್ಮ ರಿವಾಲ್ವರ್ನಿಂದ ತಲೆಗೆ ಗುಂಡುಹಾರಿಸಿಕೊಂಡಿದ್ದಾರೆ.

ಹಮಾಸ್ ಉಗ್ರ ನೆಲೆಗಳ ಮೇಲೆ ಮುಂದುವರೆದ ಇಸ್ರೇಲ್ ವೈಮಾನಿಕ ದಾಳಿ

ಗುಂಡಿನ ಸದ್ದು ಕೇಳುತ್ತಿದ್ದಂತೆ ಕೆಲ ಸಿಬ್ಬಂದ್ದಿ ಪರಿಶೀಲನೆ ನಡೆಸಿದಾಗ ಶೌಚಾಲಯ ಬಳಿ ರಕ್ತ ಕಾಣಿಸಿಕೊಂಡಿದೆ.ತಕ್ಷಣ ಅವರು ಹಿರಿಯ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಣಂಬೂರು ಪೊಲೀಸ್ ಬಂದು ಪರಿಶೀಲಿಸಿದಾಗ ಝಾಕೀರ್ಹುಸೇನ್ ಸಾವನ್ನಪ್ಪಿರುವುದು ಕಂಡುಬಂದಿದೆ.ನಂತರ ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಸದ್ಯ ಆತ್ಮಹತ್ಯೆಗೆ ನಿಕರ ಕಾರಣ ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.

RELATED ARTICLES

Latest News