ಮೋದಿ ಸರ್ಕಾರದ ಜೊತೆ ಸಿದ್ದರಾಮಯ್ಯ ಅನಗತ್ಯವಾಗಿ ಕಾಲುಕೆರೆದು ಜಗಳಮಾಡುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ

ಬೆಂಗಳೂರು, ಜು.7 – ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅನಗತ್ಯವಾಗಿ ಕಾಲುಕೆರೆದು ಜಗಳ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೇಂದ್ರದ ಜೊತೆ ಸುಖಾಸುಮನೆ ಜಗಳ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲಾ ರಾಜ್ಯಗಳು ಕೇಂದ್ರದ ಜೊತೆ ಸೌಹಾರ್ದಯುತವಾದ ವಾತಾವರಣ ಮೂಡಿಸಿ ಕೆಲಸ ಮಾಡಿಕೊಳ್ಳುತ್ತವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಕೇಂದ್ರದ ಜೊತೆ ದುರದ್ದೇಶಪೂರ್ವಕವಾಗಿ ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದೆ … Continue reading ಮೋದಿ ಸರ್ಕಾರದ ಜೊತೆ ಸಿದ್ದರಾಮಯ್ಯ ಅನಗತ್ಯವಾಗಿ ಕಾಲುಕೆರೆದು ಜಗಳಮಾಡುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ