ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ,  ಕೇಂದ್ರದ ನಿಯಮ ತಿದ್ದುಪಡಿಗೆ ಸಿದ್ದು ವಿರೋಧ

Social Share

ಬೆಂಗಳೂರು, ಜ.21- ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ) ನಿಯಮ 1954ಕ್ಕೆ ತಿದ್ದುಪಡಿ ತರುವುದರ ಮೂಲಕ ರಾಜ್ಯಗಳ ಆಡಳಿತಗಳ ಮೇಲೆ ಕೇಂದ್ರ ಸರ್ಕಾರ ನಿಯಂತ್ರಣ ಸಾಸಲು ಹೊರಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರ ತನ್ನ ವಿರೋಧ ವ್ಯಕ್ತಪಡಿಸಬೇಕು. ಪ್ರತಿ ಪಕ್ಷಗಳ ಜೊತೆ ಚರ್ಚಿಸಿ ಕೇಂದ್ರದ ನಿಲುವಿಗೆ ತನ್ನ ವಿರೋಧ ತಿಳಿಸಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಭಾರತೀಯ ಆಡಳಿತ ಸೇವೆಯ (ಸಿಬ್ಬಂದಿ)-1954 ನಿಯಮ-6ಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಇದೇ 12 ರಂದು ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಸದರಿ ಪತ್ರದಲ್ಲಿ 3 ಮುಖ್ಯ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯಗಳು ತಮ್ಮ ಅಭಿಪ್ರಾಯವನ್ನು ದಿನಾಂಕ ಜನವರಿ 25ರ ಒಳಗೆ ತಿಳಿಸಬೇಕೆಂದೂ ಸಹ ಸೂಚಿಸಲಾಗಿದೆ. ಉದ್ದೇಶಿತ ತಿದ್ದುಪಡಿಯ ಪ್ರಕಾರ ಐಎಎಸ್ ಮತ್ತು ಐಪಿಎಸ್ ಅಕಾರಿಗಳನ್ನು ಬೇಕೆಂದಾಗ ಕೇಂದ್ರಕ್ಕೆ ಕರೆಸಿಕೊಳ್ಳುವ, ಬೇಡವೆಂದಾಗ ರಾಜ್ಯಗಳಿಗೆ ವಾಪಸ್ಸು ಕಳಿಸುವ ಪ್ರಸ್ತಾಪ ಇದರಲ್ಲಿದೆ.
ಕೇಂದ್ರ ಸರ್ಕಾರವು ಐಎಎಸ್-ಐಪಿಎಸ್ ಅಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಸೂಚಿಸಿದರೆ ರಾಜ್ಯ ಸರ್ಕಾರ ನಿರ್ದಿಷ್ಟ ಸಮಯದೊಳಗೆ ಈ ಕೆಲಸವನ್ನು ಅನುಷ್ಠಾನ ಮಾಡಬೇಕು. ಅದಕ್ಕೂ ಮೊದಲು ರಾಜ್ಯಗಳು ಕೇಂದ್ರ ಸೇವೆಗೆ ಅರ್ಹರಾದವರನ್ನು ಪಟ್ಟಿ ಸಿದ್ದಪಡಿಸಬೇಕು. ಕೇಂದ್ರ ಸರ್ಕಾರವು ಎಷ್ಟು ಮಂದಿ ಅಧಿಕಾರಿಗಳು ಬೇಕು ಎಂದು ತಿಳಿಸುತ್ತದೋ ಅಷ್ಟು ಜನರನ್ನು ಕೇಂದ್ರವು ಔಪಚಾರಿಕವಾಗಿ ರಾಜ್ಯಗಳನ್ನು ಸಂಪರ್ಕಿಸಿ ತನ್ನ ಸೇವೆಗೆ ನಿಯೋಜಿಸಿಕೊಳ್ಳಬಹುದು.
ರಾಜ್ಯ ಸರ್ಕಾರ ಕೇಂದ್ರದ ಸೂಚನೆಯಂತೆ ನಡೆದುಕೊಳ್ಳದಿದ್ದರೆ ಕೇಂದ್ರ ಬಯಸಿದ ಅಧಿಕಾರಿಯನ್ನು ಆ ರ್ನಿಷ್ಟ ದಿನಾಂಕದ ಬಳಿಕ ಏಕಮುಖವಾಗಿ ಕೇಂದ್ರದ ಸೇವೆಗೆ ನಿಯೋಜಿಸಿಕೊಳ್ಳಬಹುದು ಎಂದು ತಿದ್ದುಪಡಿಯಲ್ಲಿ ತಿಳಿಸಲಾಗಿದೆ.
ಸದ್ಯ ರಾಜ್ಯ ಸೇವೆಯಲ್ಲಿರುವ ಯಾವುದೇ ಐಎಎಸ್-ಐಪಿಎಸ್ ಅಧಿಕಾರಿಯನ್ನು ಕೇಂದ್ರ ಸರ್ಕಾರ ಕೇಂದ್ರದ ಸೇವೆಗೆ ಕರೆಸಿಕೊಳ್ಳಬೇಕಿದ್ದರೆ ಅದಕ್ಕೆ ರಾಜ್ಯಗಳು ಅನುಮತಿ ನೀಡಬೇಕಿತ್ತು. ರಾಜ್ಯಗಳ ಈ ಅಕಾರವನ್ನು ಮುಲಾಜಿಲ್ಲದೆ ಕಿತ್ತು ಹಾಕಲು ಒಕ್ಕೂಟ ಸರ್ಕಾರ ಮುಂದಾಗಿದೆ ಎಂದು ಆಕ್ಷೇಪಿಸಿದ್ದಾರೆ.
ತಮಗೆ ಬೇಕಾದಂತೆ ಐಎಎಸ್-ಐಪಿಎಸ್ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಒಮ್ಮತ ಮೂಡದಿದ್ದರೆ, ರಾಜ್ಯಗಳಿಗೆ ಕೇಂದ್ರ ಸರ್ಕಾರದ ತೀರ್ಮಾನಗಳ ಬಗ್ಗೆ ತಕರಾರು ಇದ್ದರೂ ಕೂಡ ರಾಜ್ಯಗಳು ಕೇಂದ್ರದ ತೀರ್ಮಾನವನ್ನು ರ್ನಿಷ್ಟ ಅವಯ ಒಳಗೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಳ್ಳಬೇಕು. ಈ ಕುರಿತಂತೆ ಕೇಂದ್ರದ ತೀರ್ಮಾನಗಳೇ ಅಂತಿಮವಾಗಿರುತ್ತವೆ. ಈ ತಿದ್ದುಪಡಿ ಒಳ್ಳೆಯ ನಡೆಯಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
ರ್ನಿಷ್ಟ ಸಂದರ್ಭದಲ್ಲಿ ರ್ನಿಷ್ಟ ಅಕಾರಿ ಅಧಿಕಾರಿಯ ಅಕಾರಿಯ ಸೇವೆ ಸಾರ್ವಜನಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರಕ್ಕೆ ಅಗತ್ಯವಿದೆ ಎಂದು ತಿಳಿಸಿದರೆ ರಾಜ್ಯಗಳು ರ್ನಿಷ್ಟ ಅವಯ ಒಳಗೆ ಕೇಂದ್ರದ ಸೂಚನೆಯನ್ನು ಅನುಷ್ಠಾನಗೊಳಿಸಬೇಕು. ಈ ತಿದ್ದುಪಡಿಯಲ್ಲಿ ಆದೇಶ ಎಂಬ ಪದವನ್ನು ಬಳಸುವ ಧಾಷ್ಟ್ಯವನ್ನು ಕೇಂದ್ರ ಸರ್ಕಾರ ತೋರಿಸಿಲ್ಲ ಆದರೆ ಪತ್ರದ ಆಶಯ ಹಾಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಗಳ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಅಕಾರಿಗಳ ನಿಯೋಜನೆ, ವರ್ಗಾವಣೆಗಳ ಮೇಲಿನ ಅಕಾರವನ್ನು ಕೇಂದ್ರವು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿ ಸಂವಿಧಾನ ವಿರೋ, ಒಕ್ಕೂಟ ತತ್ವ ವಿರೋಯಾಗಿದೆ. ರಾಜ್ಯಗಳು ಕೇಂದ್ರದ ಬಿಜೆಪಿ ಸರ್ಕಾರದ ಸಾಮ್ರಾಜ್ಯಶಾಹಿ, ಪಾಳೇಗಾರಿಕೆ ಧೋರಣೆಯಾಗುತ್ತದೆ. ಕೇಂದ್ರದ ಈ ನಿಯಮದಿಂದ ರಾಜ್ಯಗಳು ತಮ್ಮ ಎಲ್ಲ ಅಧಿಕಾರಗಳನ್ನು ಕಳೆದುಕೊಂಡು ಕೇಂದ್ರದ ಸಾಮಂತರಂತೆ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಅಕಾರಿಗಳ ಮೇಲಿನ ನಿಯಂತ್ರಣವೆಂದರೆ, ಆಡಳಿತದ ಮೇಲಿನ ನಿಯಂತ್ರಣವೆಂದು ಅರ್ಥ. ರಾಜ್ಯ ಸರ್ಕಾರಗಳಿಗೆ ತನ್ನ ಅಕಾರಿಗಳ ಮೇಲೆ ನಿಯಂತ್ರಣವಿಲ್ಲದಿದ್ದರೆ ಜನರ ಕೆಲಸಗಳನ್ನು ಹೇಗೆ ಮಾಡಿಸುವುದು? ರಾಜ್ಯಗಳ ಚುನಾಯಿತ ಸರ್ಕಾರಗಳ ಮೇಲೆ ನಿಯಂತ್ರಣ ಸಾಸುವ ಉದ್ದೇಶದಿಂದ ಕೇಂದ್ರವು ಈ ದುಷ್ಟ ತಿದ್ದುಪಡಿಯನ್ನು ತರಲು ಹೊರಟಿದೆ.
ಇದರಿಂದ ಕೇಂದ್ರ, ರಾಜ್ಯಗಳ ನಡುವೆ ನೇರವಾದ ಹಿತಾಸಕ್ತಿ ಸಂಘರ್ಷ ಪ್ರಾರಂಭವಾಗುತ್ತದೆ. ಸೌಹಾರ್ದ ಸಂಬಂಧದ ಆಡಳಿತದ ನಡೆಸಿ, ಜನರ ಕೆಲಸ ಮಾಡಬೇಕಾದ ಕಡೆ ತನಗೆ ವಿರೋಧಿಯಾದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಗಳನ್ನು ಹೇಗೆ ನಿಯಂತ್ರಿಸಬಹುದು ಎಂಬ ಕೆಟ್ಟ ಉದ್ದೇಶ ಈ ತಿದ್ದುಪಡಿಯ ಹಿಂದೆ ಇದೆ ಎಂದು ಶಂಕೆ ವ್ಯಕ್ತ ಪಡಿಸಿದ್ದಾರೆ.
ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆದ ಬಳಿಕ ಅವರ ಸರ್ಕಾರದ ಆಡಳಿತ ವೈಖರಿ ರಾಜ್ಯಗಳ ಸಂವಿಧಾನಬದ್ದ ಹಕ್ಕುಗಳಿಗೆ ಗಂಡಾಂತರಗಳು ಬರುತ್ತಲೆ ಇವೆ. ಮೋದಿಯವರ ಸರ್ಕಾರದ ಈ ಸರ್ವಾಕಾರಿ, ಒಕ್ಕೂಟ ತತ್ವ ವಿರೋಧಿ ಧೋರಣೆಯನ್ನು ಈಗಾಗಲೇ ಆರು ರಾಜ್ಯಗಳು ಖಂಡಿಸಿರುವುದು ಮಾತ್ರವಲ್ಲದೆ ಯಾವುದೇ ಹಂತದಲ್ಲೂ ದಾಳಿಯನ್ನು ರಾಜ್ಯಗಳು ಸಹಿಸಲು ಸಾಧ್ಯವಿಲ್ಲ ಎಂದು ಪ್ರತ್ಯುತ್ತರಿಸಬೇಕಿದೆ. ರಾಜ್ಯ ಸರ್ಕಾರ ತುರ್ತಾಗಿ ವಿರೋಧ ಪಕ್ಷಗಳ ಜೊತೆ ಚರ್ಚಿಸಿ ತನ್ನ ವಿರೋಧವನ್ನು ಒಕ್ಕೂಟ ಸರ್ಕಾರಕ್ಕೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Articles You Might Like

Share This Article