ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮೋದಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 27- ವಿಕಸಿತ ಭಾರತ ಮಾಡುವುದಾಗಿ ಹೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮವನ್ನೂ ಆರಂಭಿಸಿಲ್ಲ. ಇರುವ ಸರ್ಕಾರಿ ಆಸ್ತಿಗಳನ್ನೇ ಮಾರಾಟ ಮಾಡಿಕೊಂಡರು. ಈಗ ತಮ್ಮನ್ನು ತಾವು ದೇವರು ಕಳುಹಿಸಿದ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರೂ ಅವರ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿಯೇನು ದೇವರ ಅವತಾರವೇ? ಎಂದು ಸಿಡಿಮಿಡಿಯಾದರು. … Continue reading ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮೋದಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ