ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ, ನಿಟ್ಟುಸಿರು ಬಿಟ್ಟ ಜನ

ಬೆಂಗಳೂರು, ಜು.6- ಕಳೆದ ಎರಡು ತಿಂಗಳಿನಿಂದ ಸ್ಥಿರತೆ ಕಾಯ್ದುಕೊಂಡಿದ್ದ ತರಕಾರಿ ಬೆಲೆ ಹಂತ ಹಂತವಾಗಿ ಇಳಿಮುಖವಾಗುತ್ತಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಬಿರು ಬೇಸಿಗೆ ಹಾಗೂ ನೀರಿನ ಅಭಾವದಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಭಾರೀ ಹೊರೆಯಾಗಿತ್ತು. ಅದರಲ್ಲೂ ಬೀನ್ಸ್ ಡಬ್ಬಲ್‌ ಸೆಂಚುರಿ ಬಾರಿಸಿತ್ತು. ಕಳೆದ ಐದು ದಿನಗಳಿಂದ ಬೆಲೆಗಳು ಇಳಿಮುಖವಾಗುತ್ತಿವೆ. ರಾಜ್ಯದ ವಿವಿಧೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಹೊಸ ಬೆಳೆಗಳು ಮಾರುಕಟ್ಟೆಗೆ ಬರುತ್ತಿದ್ದು, ಬೆಲೆಯಲ್ಲಿ ಇಳಿಮುಖವಾಗುತ್ತಿದೆ. ಜತೆಗೆ ಆಷಾಢ ಕೂಡ ಪ್ರಾರಂಭವಾಗಿದ್ದು, ಈ ಸಮಯದಲ್ಲಿ ಹೆಚ್ಚು ಶುಭ … Continue reading ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ, ನಿಟ್ಟುಸಿರು ಬಿಟ್ಟ ಜನ