ಬೆಂಗಳೂರು,ಸೆ.26- ತೀವ್ರ ಜ್ವರದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡಿದೆ.
ಪ್ರಸ್ತುತ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ನಿನ್ನೆಗಿಂತಲೂ ಸುಧಾರಿಸಿದ್ದು, ಎರಡು ದಿನಗಳ ಬಳಿಕ ಜನರಲ್ ವಾರ್ಡ್ಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜ್ವರ ಕಡಿಮೆಯಾಗಿರುವುದರಿಂದ ಆತಂಕಪಡಬೇಕಿಲ್ಲ. ಅಲ್ಲದೆ ಅವರು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿರುವುದರಿಂದ ಎರಡೂಮೂರು ದಿನಗಳಲ್ಲಿ ಜನರಲ್ ವಾರ್ಡ್ಗೆ ಸ್ಥಳಾಂತರವಾಗಲಿದ್ದಾರೆ. ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಎಸ್.ಎಂ.ಕೃಷ್ಣ ಅವರು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯದ ಬಗ್ಗೆ ವಿಚಾರಿಸಿದರು.
ಎಸ್.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾರೊಬ್ಬರು ಆಸ್ಪತ್ರೆಗೆ ಬರಬೇಕಾದ ಅಗತ್ಯವಿಲ್ಲ. ನೀವಿದ್ದಲ್ಲೇ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿ ಎಂದು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳಿಗ ಮನವಿ ಮಾಡಿದ್ದಾರೆ.