Tuesday, November 4, 2025
Homeರಾಜ್ಯಕೋಟೆಕಾರು ಬ್ಯಾಂಕ್ ದರೋಡೆಕೋರರನ್ನು ಸೆರೆಹಿಡಿದ ಪೊಲೀಸರಿಗೆ ಸ್ಪೀಕರ್ ಖಾದರ್ ಶ್ಲಾಘನೆ

ಕೋಟೆಕಾರು ಬ್ಯಾಂಕ್ ದರೋಡೆಕೋರರನ್ನು ಸೆರೆಹಿಡಿದ ಪೊಲೀಸರಿಗೆ ಸ್ಪೀಕರ್ ಖಾದರ್ ಶ್ಲಾಘನೆ

Speaker Khader praises police for arresting Kotekar bank robbers

ಬೆಂಗಳೂರು, ಜ.21-ತಲಪಾಡಿಯ ಕೋಟೆಕಾರು ಸಹಕಾರಿ ಸಂಘದಲ್ಲಿ ಹಾಡಹಗಲೇ ದರೋಡೆಗೈದ ಆರೋಪಿಗಳನ್ನು ತಮಿಳುನಾಡಿನಲ್ಲಿ ಕ್ಷಿಪ್ರವಾಗಿ ಬಂಧಿಸಿರುವ ಪೊಲೀಸರ ದಿಟ್ಟ ಕ್ರಮವನ್ನು ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಶ್ಲಾಘಿಸಿ, ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ದರೋಡೆಯಾದ ಅಲ್ಪಾವಧಿಯಲ್ಲೇ ಬಂಧಿಸಿರುವುದರಿಂದ ಪೊಲೀಸರ ಮೇಲಿನ ವಿಶ್ವಾಸ ಮತ್ತು ನಂಬಿಕೆ ಇಮಡಿಯಾಗಿದೆ. ಪೊಲೀಸರ ಶ್ರಮಕ್ಕೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದ್ದಾರೆ.

- Advertisement -

ಇದೇ ರೀತಿ ಬಂಟ್ವಾಳ ನಾರ್ಶದ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣದಲ್ಲೂ ಆರೋಪಿಗಳು ಶೀಘ್ರ ಪೊಲೀಸ್ ಬಲೆಗೆ ಬೀಳಲಿದ್ದಾರೆ. ಇದರ ತನಿಖೆಯಲ್ಲಿ ಬಹಳಷ್ಟು ಪ್ರಗತಿ ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.

- Advertisement -
RELATED ARTICLES

Latest News