ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ದೇವರಿಗೆ ಮೊರೆ, ವಿಶೇಷ ಪೂಜೆ

ಬೆಂಗಳೂರು,ಜು.26- ಸಕಾಲಕ್ಕೆ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಬೊಬ್ಬೆ ಹೊಡೆದರೂ ಸರ್ಕಾರದ ಕಿವಿಗೆ ಬೀಳದಿರುವುದರಿಂದ ಸಾಮಾಜಿಕ ಹೋರಾಟಗಾರರು ಇದೀಗ ದೇವರ ಮೊರೆ ಹೋಗಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಶ್ರೀ ಆದಿಶಕ್ತಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಬುದ್ದಿ ನೀಡುವ ಮೂಲಕ ಪ್ರಜಾಪ್ರಭುತ್ವ ಉಳಿಸಲು ಸಹಾಯ ಮಾಡು ತಾಯಿ ಎಂದು ಪ್ರಾರ್ಥಿಸಿದ್ದಾರೆ. ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಟ್ರಸಿಗಳಾದ ಅಮರೇಶ್‌, ವೀರೇಶ್‌, ಸಾಮಾಜಿಕ ಹೋರಾಟಗಾರರಾದ ನಾಗೇಶ್ವರ್‌ ಬಾಬು, ತಿಮರೆಡ್ಡಿ, ಮಲ್ಲಿಕಾರ್ಜುನ್‌ … Continue reading ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ದೇವರಿಗೆ ಮೊರೆ, ವಿಶೇಷ ಪೂಜೆ