ಬೆಂಗಳೂರು,ಜ.31-ಕಾನ್ಫಿಡೆಂಟ್ ಗ್ರೂಪ್ನ ಸಿಜೆ ರಾಯ್ ಅವರು ಆತಹತ್ಯೆ ಮಾಡಿಕೊಂಡಿರುವ ಕಚೇರಿಯ ಕೊಠಡಿಯಲ್ಲಿ ಈತನಕ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಘಟನೆ ನಡೆದ ನಂತರ ನಮ ಎಲ್ಲಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿವೆ. ಅಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ ಎಂದು ಹೇಳಿದರು.
ರಾಯ್ ಅವರ ಆತಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಅವರ ವಾರಸುದಾರರಿಗೆ ಹಸ್ತಾಂತರಿಸಿದ್ದೇವೆ ಎಂದರು.
ಕಾನ್ಫಿಡೆಂಟ್ ಗ್ರೂಪ್ನ ಎಂಡಿ ಜೋಸೆಫ್ ಎಂಬುವವರು ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿ ಸಮಗ್ರ ತನಿಖೆ ನಡೆಸುವಂತೆ ಕೋರಿದ್ದಾರೆ.ರಾಯ್ ಅವರ ಸಹೋದರ ಸಹ ಕೆಲವೊಂದು ಆರೋಪ ಮಾಡಿದ್ದಾರೆ.
ಈ ಎಲ್ಲವುದರ ಬಗ್ಗೆ ತನಿಖೆ ಮಾಡುತ್ತೇವೆ. ರಾಯ್ ಅವರ ಕುಟುಂಬದವರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದರು.
