Homeರಾಜ್ಯಮಂತ್ರಾಲಯಕ್ಕೆ ತೆರಳುತ್ತಿದ್ದ ಓಮ್ನಿ ವಾಹನಕ್ಕೆ ಲಾರಿ ಡಿಕ್ಕಿ, ಮಕ್ಕಳು ಸೇರಿ ನಾಲ್ವರು ದುರ್ಮರಣ

ಮಂತ್ರಾಲಯಕ್ಕೆ ತೆರಳುತ್ತಿದ್ದ ಓಮ್ನಿ ವಾಹನಕ್ಕೆ ಲಾರಿ ಡಿಕ್ಕಿ, ಮಕ್ಕಳು ಸೇರಿ ನಾಲ್ವರು ದುರ್ಮರಣ

Four people, including children, died in a lorry collision with an omni vehicle

ಕೊಪ್ಪಳ,ಜೂ.27- ಮಂತ್ರಾಲಯಕ್ಕೆ ತೆರಳುತ್ತಿದ್ದ ಯಾತ್ರಿಕರಿದ್ದ ಓಮ್ನಿ ವಾಹನಕ್ಕೆ ಲಾರಿಯೊಂದು ರಸ್ತೆ ವಿಭಜಕ ದಾಟಿ ಎದುರಿಗೆ ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ನಾಲ್ವರು ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಕುಕನೂರು ತಾಲ್ಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ದುರಂತ ಇಂದು ಮುಂಜಾನೆ 1.30ರ ಸುಮಾರಿನಲ್ಲಿ ಸಂಭವಿಸಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್‌ (25), ರಮೇಶ್‌ ಬಳ್ಳಾರಿ (45) ಮತ್ತು ಪ್ರವೀಣ್‌ (23)ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಬ್ಬಾರ ಗ್ರಾಮದ ನಿವಾಸಿಗಳಾಗಿದ್ದು, ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ಮಂತ್ರಾಲಯಕ್ಕೆ ಯಾತ್ರೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ನಿಯಂತ್ರಣ ತಪ್ಪಿದ ಲಾರಿಯು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ವ್ಯಾನ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.ವ್ಯಾನ್‌ನಲ್ಲಿ 9 ಮಂದಿ ಇದ್ದರು ನಾಲ್ವರು ಮೃತಪಟ್ಟಿದ್ದು ನಾಲ್ವರು ಮಕ್ಕಳು ಸೇರಿ ಐದು ಮಂದಿ ಗಾಯಗೊಂಡದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುಕನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News