Homeರಾಜ್ಯಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ : ವಿಜಯೇಂದ್ರ ವಾಗ್ದಾಳಿ

ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ : ವಿಜಯೇಂದ್ರ ವಾಗ್ದಾಳಿ

Government does not care about farmers: Vijayendra attacks

ಬೆಂಗಳೂರು,ಜೂ.17- ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರಕ್ಕೆ ರಿಯಲ್‌ ಎಸ್ಟೇಟ್‌ ನಡೆಸುವುದೇ ಪ್ರಮುಖ ಆದ್ಯತೆಯಾಗಿದೆ ಹೊರತು ರೈತರ ಹಿತ ಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ತಮ ಸರ್ಕಾರದ ಆದ್ಯತೆ ರಿಯಲ್‌ ಎಸ್ಟೇಟ್‌ ಎಂಬುದನ್ನು ತೋರಿಸಿದ್ದಾರೆ. ಬಿಡದಿಯಲ್ಲಿ ಟೌನ್‌ಶಿಪ್‌ ಮಾಡಲು ಮುಂದಾಗಿರುವ ಸರ್ಕಾರ ಬಲವಂತವಾಗಿ ರೈತರ ಜಮೀನು ಕಸಿಯಲು ಮುಂದಾಗಿದ್ದಾರೆ. ಇದನ್ನು ಬಿಜೆಪಿ ವಿರೋಧಿಸಲಿದೆ ಎಂದರು.

ಅನ್ನದಾತರಿಗೆ ಈ ಸರ್ಕಾರ ನೆರವಾಗಬೇಕಿತ್ತು. ಆದರೆ ದುರದೃಷ್ಟವೆಂದರೆ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಸರ್ಕಾರಕ್ಕೆ ಮುಖ್ಯವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭಂಡತನ ಬಿಟ್ಟು ರೈತರ ಸಮಸ್ಯೆಗಳನ್ನು ಆಲಿಸಬೇಕು. ಅವರನ್ನು ಒಕ್ಕಲೆಬ್ಬಿಸಬಾರದು. ಟೌನ್‌ಶಿಪ್‌ಗಾಗಿ ಭೂಸ್ವಾಧೀನವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ನನ್ನ ವಿರುದ್ಧ ಬಿಜೆಪಿ ನಾಯಕರ ವಿರುದ್ಧ, ವಿರೋಧಪಕ್ಷದ ನಾಯಕರ ವಿರುದ್ಧ ಪೋಸ್ಟರ್‌ ಆಂದೋಲನ ನಡೆಸಲಾಗುತ್ತಿದೆ. ನಿಮ ಗೊಡ್ಡು ಬೆದರಿಕೆ ಹೆದರಲು ನಾವು ಕಾಂಗ್ರೆಸ್‌‍ ಶಾಸಕರಲ್ಲ. ಈ ನಾಡಿನ ರೈತರ ಪರವಾಗಿ ನಿಲ್ಲುವ ಕರ್ತವ್ಯ ನಮದು. ಅದನ್ನು ಮಾಡೇ ಮಾಡುತ್ತೇವೆ. ವಿರೋಧ ಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತೇವೆ ಎಂದರು.

ಗ್ಯಾರಂಟಿಗಳಲ್ಲಿ ಅಕ್ರಮ ಆಗೋವರೆಗೆ ಅನುಷ್ಠಾನ ಸಮಿತಿಗಳು ಕತ್ತೆ ಕಾಯುತ್ತಿದ್ದವೇ. ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಆದಾಯ ತೆರಿಗೆ ಪಾವತಿ ಮಾಡುವವರು ಗೃಹ ಲಕ್ಷಿ ಪಡೆಯುತ್ತಿದ್ದಾರೆ ಎಂದು ಅನುಷ್ಠಾನ ಸಮಿತಿ ಹೇಳಿದೆ. ಗ್ಯಾರಂಟಿ ಜಾರಿ ಮಾಡುವಾಗ ಕಾಕಾ ಪಾಟೀಲ್‌, ಮಹಾದೇವಪ್ಪಗೆ ಫ್ರೀ ಎಂದಿದ್ದರು. ಈಗ ಹೇಗೆ ಅವರೆಲ್ಲ ತೆರಿಗೆ ಪಾವತಿದಾರರಾಗುತ್ತಾರೆ ಎಂದು ಪ್ರಶ್ನೆ ಮಾಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ನೀಡಲಾಗಿದೆ. ಜಿಲ್ಲೆಯಲ್ಲಿ ಅಧ್ಯಕ್ಷರಿದ್ದಾರೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನ ಸಮಿತಿ ಇದೆ. ಇವರೆಲ್ಲ ಕತ್ತೆ ಕಾಯುತ್ತಿದ್ದಾರೆಯೇ ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಈಗ ಹೊರೆ ಆಗ್ತಾ ಇದೆ. ಸಮಿತಿಗಳಿಗೆ, ಅಧ್ಯಕ್ಷರಿಗೆ ಕಚೇರಿ, ವೇತನ, ಇತರ ಸೌಲಭ್ಯಗಳಿಗೆ ನೂರಾರು ಕೋಟಿ ವ್ಯಯಿಸಲಾಗುತ್ತಿದೆ. ಇದು ಸರ್ಕಾರದ ವೈಫಲ್ಯ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ ಒಂದೊಂದೆ ನೆಪ ಹೇಳಿಕೊಂಡು ಈಗ ಸೌಲಭ್ಯಗಳಿಗೆ ಕತ್ತರಿ ಹಾಕ್ತ ಇದ್ದಾರೆ. ಇದಕ್ಕೆ ರಾಜ್ಯದ ಜನ ಛೀಮಾರಿ ಹಾಕ್ತ ಇದ್ದಾರೆ ಎಂದರು.

ರಾಜ್ಯ ಸರ್ಕಾರವೇ ಎಸ್‌‍ಐಆರ್‌ ವಿಚಾರದಲ್ಲಿ ಧ್ವಂಧ್ವ ನಿಲುವು ತೋರಿಸುತ್ತಿದೆ. ಅಧಿಕಾರಿಗಳನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ಬಿಎಲ್‌ಒಗಳಿಗೆ ರಾಜ್ಯ ಸರ್ಕಾರ ಕುಮಕ್ಕು ನೀಡುತ್ತಿದೆ ಎಂದು ದೂರಿದರು.

ಕಾಂಗ್ರೆಸ್‌‍ನ ಮಹಾನ್‌ ನಾಯಕ ರಾಹುಲ್‌ ಗಾಂಧಿ ಅವರು ಬೇರೆ ದೇಶ ನೈಜ ಪೌರತ್ವ ಪಡೆದಿದ್ದಾರೆ. ಇನ್ನೊಂದು ದೇಶದ ಪೌರತ್ವ ಇಟ್ಟುಕೊಂಡು ಅಕ್ರಮವಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಡಿ.ಕೆ. ಶಿವಕುಮಾರ್‌ ಹಾಗೂ ಪ್ರಿಯಾಂಕ್‌ ಖರ್ಗೆ ಅವರು ಬೆಳಕು ಚೆಲ್ಲುವ ಕೆಲಸವನ್ನು ಮಾಡಲಿ ಎಂದರು.

ಚುನಾವಣಾ ಆಯೋಗ ಅಕ್ರಮ ವಲಸಿಗರ ಪತ್ತೆಗೆ, ಮತಪಟ್ಟಿಯಲ್ಲಿ ಎರಡು ಕಡೆ ಹೆಸರು ಇದ್ದರೆ, ಮೃತಪಟ್ಟವರ ಹೆಸರು ಸೇರಿದ್ದರೆ ಸರಿಪಡಿಸಲು ಎಸ್‌‍ಐಆರ್‌ ಮಾಡುತ್ತಾ ಇದೆ. ಸಾಂವಿಧಾನಿಕ ಸಂಸ್ಥೆ ವಿರುದ್ಧ ಅಧಿಕಾರಿಗಳನ್ನು, ಜನರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್‌‍ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದರು.

ರಾಜ್ಯ ಸರ್ಕಾರ ಸುಧಾರಣೆಗಳನ್ನು ಮಾಡಲಿ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಫಲಾನುಭವಿಗಳಿಗೆ ಕತ್ತರಿ ಹಾಕುತ್ತಿದ್ದೇವೆ ಎಂಬ ಸತ್ಯವನ್ನು ಜನರ ಮುಂದೆ ಮುಚ್ಚಿಡಲಿ. ಈ ಸರ್ಕಾರದ ಯೋಗ್ಯತೆಗೆ ಮೂರು ವರ್ಷದಲ್ಲಿ ಜನರಿಗೆ ಮನೆ ನೀಡಲಿಲ್ಲ. ರೈತರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ, ಗಂಗಾ ಕಲ್ಯಾಣ ಅಕ್ರಮ ತನಿಖೆ ಮಾಡಲಿಲ್ಲ. ಹೈನುಗಾರಿಕೆಗೆ ಪ್ರೋತ್ಸಾಹ ಧನ ನೀಡಲಿಲ್ಲ ಎಂದು ಹೇಳಿದರು.

ಆರ್‌ಎಸ್‌‍ಎಸ್‌‍ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಒಂದಲ್ಲ ಒಂದು ಹೇಳಿಕೆ ನೀಡುತ್ತಾ ಇದ್ದಾರೆ. ಅವರ ಬಾಯಿ ಚಪಲಕ್ಕೆ ಉತ್ತರ ಕೊಡುವುದಿಲ್ಲ. ಅವರು ರಾಜ್ಯದ ಗೃಹಸಚಿವರು. ಅವರು ಮಾಡಬೇಕಾದ ಕೆಲಸ ತುಂಬಾ ಇವೆ. ಅಕ್ರಮ ನುಸುಳುಕೋರರು, ಲವ್‌ ಜಿಹಾದ್‌, ಹಿಂದೂ ಕಾರ್ಯಕರ್ತರ ಹತ್ಯೆ ಬಗ್ಗೆ ಗಮನ ಹರಿಸಲಿ. ಅದನ್ನು ಬಿಟ್ಟು ಬೇರೆ ಮಾತನಾಡುತ್ತಾರೆ ಎಂದು ಇದೇ ವೇಳೆ ವಿಜಯೇಂದ್ರ ತಿರುಗೇಟು ನೀಡಿದರು.

RELATED ARTICLES
spot_img

Latest News