Thursday, April 16, 2026
Homeರಾಜ್ಯದ್ವೇಷ ಭಾಷಣ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು

ದ್ವೇಷ ಭಾಷಣ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು

Hate Speech: Complaint against Mallikarjun Kharge

ಬೆಂಗಳೂರು,ಏ.8- ಆರ್‌ಎಸ್‌‍ಎಸ್‌‍ ಹಾಗೂ ಬಿಜೆಪಿ ವಿರುದ್ದ ವಿವಾದತಾಕ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಲಾಗಿದೆ.

ಆಸ್ಸಾಂ ರಾಜ್ಯದ ಗುವಾಹಟಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಆಕ್ಸಮ್‌ ಪ್ರಾಂತ್‌ನ ಪ್ರಾಂತ್‌ ಕಾರ್ಯವಾಹ ಖಗೇನ್‌ ಸೈಕಿಯಾ ಎಂಬುವವರು ಕಾಮ್‌ರೂಪ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು, ನೀಲಂಬಜಾರ್‌ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಕೋಮುವಾದಿ ಮತ್ತು ಪ್ರಚೋದನಕಾರಿ ದ್ವೇಷ ಭಾಷಣ ಮಾಡಿದ್ದಕ್ಕಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌‍ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಕಳೆದ ಏ.7ರಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನೀಲಂಬಜರ್‌ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಅಸ್ಸಾಂ ರಾಜ್ಯದಾದ್ಯಂತ ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಕಾರ್ಯಕರ್ತರ ಜೀವ ಮತ್ತು ಸ್ವಾತಂತ್ರ್ಯಕ್ಕೆ ಹಾನಿ ಮಾಡುವ ಉದ್ದೇಶದಿಂದ ಹೆಚ್ಚಿನವರು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಸಾರ್ವಜನಿಕರ ಮುಂದೆ ಅತ್ಯಂತ ಕೋಮುವಾದಿ ಹೇಳಿಕೆ ನೀಡಿದ್ದಾರೆ ಎಂಬುದನ್ನು ಉಲ್ಲೇಖ ಮಾಡಿದ್ದಾರೆ.

ನೀವು ನಮಾಜ್‌ ಮಾಡುವಾಗ ನಿಮ ಮುಂದೆ ವಿಷಪೂರಿತ ಹಾವು ಓಡಾಡುತ್ತಿದ್ದರೆ, ನೀವು ಪ್ರಾರ್ಥನೆಯನ್ನು ನಿಲ್ಲಿಸಿ ಮೊದಲು ವಿಷಪೂರಿತ ಹಾವನ್ನು ಕೊಲ್ಲಲು ಧಾವಿಸಬೇಕು ಎಂದು ಹೇಳುವ ಮೂಲಕ ಅವರು ಧರ್ಮದ ಹೆಸರಿನಲ್ಲಿ ಮತ ಯಾಚಿಸಿ ದ್ವೇಷವನ್ನು ಹರಡಿದರು ಎಂದು ದೂರಿದ್ದಾರೆ.

ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಅದೇ ವಿಷಪೂರಿತ ಹಾವಿನಂತೆ ಎಂದು ನಾನು ನಿಮಗೆ ಹೇಳುತ್ತೇನೆ. ನೀವು ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿಯಂತೆ ವಿಷಪೂರಿತ ಹಾವನ್ನು ಕೊಲ್ಲದಿದ್ದರೆ, ನೀವು ಬದುಕುಳಿಯಲು ಸಾಧ್ಯವಿಲ್ಲ. ಅವರ ದ್ವೇಷ ಭಾಷಣದ ವೀಡಿಯೊ ವ್ಯಾಪಕವಾಗಿ ಪ್ರಸಾರವಾಗುತ್ತಿದೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿಯೂ ಲಭ್ಯವಿದೆ. ನವದೆಹಲಿ ಮೂಲದ ಸುದ್ದಿ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿದೆ ಎಂದು ಹೇಳಿದ್ದಾರೆ.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 83 ರ ಪ್ರಕಾರ ಅಭ್ಯರ್ಥಿಯ ಪರವಾಗಿ ಖರ್ಗೆ ಅವರು ಮಾಡಿದ ದುರುದ್ದೇಶಪೂರಿತ ಹೇಳಿಕೆಯು ಸಾರ್ವಜನಿಕರ ಮುಂದೆ, ವಿಶೇಷವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌‍ ಬೆಂಬಲಿಗರ ಮುಂದೆ ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಕ್ರಿಮಿನಲ್‌ ರೀತಿಯಲ್ಲಿ ಬೆದರಿಸಿದೆ ಮತ್ತು ಆ ಮೂಲಕ ಅವರು ಕಾಂಗ್ರೆಸ್‌‍ ಮತ್ತು ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಬೆಂಬಲಿಗರ ನಡುವೆ ದ್ವೇಷವನ್ನು ಪ್ರಚೋದಿಸುವ ಅಥವಾ ಹಿಂಸಾಚಾರವನ್ನು ಪ್ರಚೋದಿಸುವ ಅಪರಾಧವನ್ನು ಮಾಡಿದ್ದಾರೆ.

ಇದಲ್ಲದೆ, ಬಿಜೆಪಿ ಮತ್ತು ಆರ್‌ಸ್‌‍ಎಸ್‌‍ನ ಸಿದ್ಧಾಂತವನ್ನು ವಿವರಿಸುವ ಈ ಕೋಮು ಹೇಳಿಕೆಯು ಸಮಾಜಕ್ಕೆ ವಿಷಕಾರಿ ಮತ್ತು ಸಂಸ್ಥೆಗಳನ್ನು ವಿಷಕಾರಿ ಹಾವು ಎಂದು ಹಣೆಪಟ್ಟಿ ಕಟ್ಟಿ ಭಾರತೀಯ ಜನತಾ ಪಕ್ಷವನ್ನು ತೊಡೆದುಹಾಕಲು ಕರೆ ನೀಡುವುದು ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಸದಸ್ಯರಿಗೆ ದೈಹಿಕ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಈ ಹೇಳಿಕೆಯ ಮೂಲಕ ಖರ್ಗೆ ಅವರು ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಉತ್ತೇಜಿಸಲು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವಂತೆ ನಮ ಸಮಾಜದಲ್ಲಿ ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯ ಉಲ್ಲಂಘಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹೇಳಿಕೆಯು ಅಸ್ಸಾಂ ರಾಜ್ಯದ ಹಿಂದೂ ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗೆ ಕಾರಣವಾಗಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಆದ್ದರಿಂದ, ಭಾರತೀಯ ಅಪರಾಧ ನ್ಯಾಯಶಾಸ್ತ್ರದ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡು, ಪ್ರಕರಣ ದಾಖಲಿಸಿ, ಹೇಳಿಕೆ ನೀಡಿದವರನ್ನು ಅಂದರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌‍ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

RELATED ARTICLES

Latest News