ಬೆಂಗಳೂರು, ಮೇ 3- ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರಂದು ಉದ್ಘಾಟಿಸಲಾಗುವುದು ಎಂದು ಅರಣ್ಯ ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕಿ, ಜನರ ಪ್ರೆತಿಗೆ ಪಾತ್ರನಾಗಿದ್ದ ಅರ್ಜುನ ಆನೆಯ ಸಾವು ಇಲಾಖೆಗೆ ದೊಡ್ಡ ನಷ್ಟವಾಗಿದ್ದು, ಸಮಾಧಿ ಸ್ಥಳದಲ್ಲಿ ಮತ್ತು ನಾಗರಹೊಳೆಯ ಬಳ್ಳೆಯಲ್ಲಿ ಸಾರಕ ನಿರ್ಮಿಸುವುದಾಗಿ ಸರ್ಕಾರ ತಿಳಿಸಿತ್ತು.
ಅದರಂತೆ ಈಗಾಗಲೇ ಬಳ್ಳೆ ಶಿಬಿರದಲ್ಲಿ ಅರ್ಜುನನ ಹಿರಿಮೆ, ಸಾಹಸಗಾಥೆಗಳನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೂ ತಿಳಿಸುವ ರೀತಿಯಲ್ಲಿ ಸಾರಕ ಅನಾವರಣ ಮಾಡಲಾಗಿದೆ. ಮೇ 6ರಂದು ಯಸಳೂರಿನ ಸಮಾಧಿ ಸ್ಥಳದ ಸಾರಕ ಉದ್ಘಾಟಿಸಲಾಗುವುದು ಎಂದು ವಿವರಿಸಿದರು.
ಈ ಎರಡೂ ಸ್ಥಳದಲ್ಲಿ ಅರ್ಜುನ ಆನೆಯ ಪ್ರತಿರೂಪದಂತಿರುವ ಪ್ರತಿಮೆಗಳನ್ನು ನಿರ್ಮಿಸಲಾಗಿದ್ದು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಕಾರ್ಯಾಚರಣೆಯಲ್ಲಿ ಮತ್ತು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡ ಚಿತ್ರಗಳನ್ನು ಹಾಕುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಯಸಳೂರಿನಲ್ಲಿ ಸಾರಕ ಸಿದ್ಧವಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಕಾರಣಾಂತರದಿಂದ ಸಾರಕ ಉದ್ಘಾಟನೆ ವಿಳಂಬವಾಗಿದ್ದು, ಈಗ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವರು ತಿಳಿಸಿದರು.
