Homeರಾಜ್ಯದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಿದ್ದರಾಮಯ್ಯ-ಡಿಕೆಶಿ ಚರ್ಚೆ

ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಿದ್ದರಾಮಯ್ಯ-ಡಿಕೆಶಿ ಚರ್ಚೆ

Siddaramaiah-DK Shivakuma Sena discuss with Delhi High Command

ನವದೆಹಲಿ, ಜೂ.2: ರಾಜ್ಯದ ನೂತನ ಸಚಿವ ಸಂಪುಟ ರಚನೆ ಮತ್ತು ಸಚಿವರ ಆಯ್ಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ನಿಯೋಜಿತ ಮುಖ್ಯಮಂತ್ರಿ D. K. Shivakumar ಅವರು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು.

ಈ ವೇಳೆ ಎಸಿಸಿ ಅಧ್ಯಕ್ಷ Mallikarjun Kharge ಮತ್ತು ಕಾಂಗ್ರೆಸ್ ನಾಯಕ Rahul Gandhi ಅವರೊಂದಿಗೆ ಸಚಿವ ಸಂಪುಟದ ಸಂಭಾವ್ಯ ಸದಸ್ಯರ ಆಯ್ಕೆ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಸೇರಿದಂತೆ ವಿವಿಧ ರಾಜಕೀಯ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ರಾಜ್ಯ ಸಚಿವ ಸಂಪುಟದಲ್ಲಿ ಯಾರಿಗೆ ಅವಕಾಶ ನೀಡಬೇಕು, ವಿವಿಧ ಸಮುದಾಯಗಳು ಮತ್ತು ಜಿಲ್ಲೆಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವುದು ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬಂದಿರುವುದಾಗಿ ತಿಳಿದುಬಂದಿದೆ.

ಸಭೆಯ ಬಳಿಕ ಸಚಿವ ಸಂಪುಟದ ಅಂತಿಮ ಪಟ್ಟಿಗೆ ಕೇಂದ್ರ ನಾಯಕತ್ವದ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಮುಂದುವರಿದಿದ್ದು, ಶೀಘ್ರದಲ್ಲೇ ಸಚಿವರ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

RELATED ARTICLES

Latest News