ಬೆಂಗಳೂರು,ಅ.14– ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ.
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿ ಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು ನಿಯಮಗಳನ್ನು ಉಲ್ಲಂಘಿಸ ಬಾರದು ಎಂದುಸೂಚಿಸಿದರು.
ಕುಂಬಳಗೂಡು ಠಾಣೆ ಪೊಲೀಸರು, ಈಗಾಗಲೇ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ಈ ಕುರಿತು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸಭೆ ನಡೆಸಿದ್ದೇವೆ ಎಂದರು.
ಬೆಂಗಳೂರು ನಗರಕ್ಕೆ ಡ್ರಗ್ಸ್ ಎಲ್ಲಿಂದ ಸರಬರಾಜು ಆಗುತ್ತಿದೆ ಎಂಬುವುದನ್ನು ಪತ್ತೆ ಹಚ್ಚಲು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಈ ತಂಡ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.
ಡ್ರಗ್ಸ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಈವಾರ ಬಂಧಿಸಿ 2 ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದೇವೆ. ಕಳೆದ ವಾರ 23.84 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು ಎಂದು ಅವರು ವಿವರಿಸಿದರು.
ಡ್ರಗ್್ಸ ಜಾಲವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಡ್ರಗ್ಸ್ ಸರಬರಾಜು ಹಾಗೂ ಮಾರಾಟ ಮಾಡುವವರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.