ನವದೆಹಲಿ,ಜು.24– ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ರೀತಿಗೆ ಕರ್ನಾಟಕ ಹೈಕೋರ್ಟ್ನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ.ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯಪೀಠವು, ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿತು.
ನ್ಯಾಯಾಂಗ ವಿವೇಚನೆಯನ್ನು ನ್ಯಾಯಯುತವಾಗಿ ಅನ್ವಯಿಸಲಾಗಿದೆಯೇ ಎಂದು ಪ್ರಶ್ನಿಸಿದ ಪೀಠವು, ಆದೇಶದ ಬಗ್ಗೆ ನಾವು ಹೇಳಲು ವಿಷಾದಿಸುತ್ತೇವೆ. ಆದರೆ ಹೈಕೋರ್ಟ್ ಎಲ್ಲಾ ಜಾಮೀನು ಅರ್ಜಿಗಳಲ್ಲಿ ಒಂದೇ ರೀತಿಯ ಆದೇಶಗಳನ್ನು ನಿರ್ದೇಶಿಸುತ್ತದೆಯೇ? ಎಂದು ನ್ಯಾಯಾಲಯ ಪ್ರಶ್ನೆ ಮಾಡಿತು.
ನಮಗೆ ಸಮಸ್ಯೆಯಾಗಿರುವುದು ಹೈಕೋರ್ಟ್ನ ನೀಡಿರುವ ತೀರ್ಪು. ವಿಧಾನ. ಇದು ಹೈಕೋರ್ಟ್ ನ್ಯಾಯಾಧೀಶರ ತಿಳುವಳಿಕೆಯೇ? ಸೆಷನ್್ಸ ನ್ಯಾಯಾಧೀಶರಾಗಿದ್ದರೆ ನಮಗೆ ಅರ್ಥವಾಗುತ್ತಿತ್ತು. ಆದರೆ ಹೈಕೋರ್ಟ್ ನ್ಯಾಯಾಧೀಶರು ಅಂತಹ ತಪ್ಪು ಮಾಡುತ್ತಿದ್ದಾರೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದೆ.
ಇದನ್ನು ವಿವೇಚನೆಯ ತೀರ್ಪು ಎನ್ನಲು ನಾವ್ಯಾರು ಒಪ್ಪುತ್ತಿಲ್ಲ ಎಂದ ಸುಪ್ರೀಂಕೋರ್ಟ್, ಇಂತಹ ಗಂಭೀರ ಪ್ರಕರಣದಲ್ಲಿ ಜಾಮೀನು ನೀಡುವ ಮೊದಲು ಹೈಕೋರ್ಟ್ ತನ್ನ ಮನಸ್ಸನ್ನು ವಿವೇಚನಾಯುಕ್ತವಾಗಿ ಬಳಸಿದೆಯೇ ಎಂದು ಮರುಪ್ರಶ್ನೆ ಮಾಡಿದರು. ಹೈಕೋರ್ಟ್ ಮಾಡಿದ ಅದೇ ತಪ್ಪನ್ನು ನಾವು ಮಾಡುವುದಿಲ್ಲ ಎಂದ ಪೀಠ, ಇದು ಕೊಲೆ ಮತ್ತು ಪಿತೂರಿಯ ಪ್ರಕರಣವಾಗಿರುವುದರಿಂದ ನಾವು ಸ್ವಲ್ಪ ಗಂಭೀರವಾಗಿರುತ್ತೇವೆ ಎಂದು ಹೇಳಿತು.
- ಧರ್ಮಸ್ಥಳದ ಸುತ್ತ ಹೂತಿಟ್ಟ ಶವಗಳ ರಹಸ್ಯ ಬೇಧಿಸಲು ಎಸ್ಐಟಿ ತನಿಖೆ ಆರಂಭ
- ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ 15 “ಸುಪ್ರೀಂ” ಮಾರ್ಗಸೂಚಿ ಬಿಡುಗಡೆ
- ಚುನಾವಣಾ ಅಕ್ರಮ : ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿ.ಕೆ.ಸುರೇಶ್ ಸಹಮತಿ
- ಎನ್ಡಿಎ ಸರ್ಕಾರದಿಂದ ಚುನಾವಣಾ ಆಯೋಗ ದುರುಪಯೋಗದ ವಿರುದ್ಧ ದೇಶಾದ್ಯಂತ ಅಭಿಯಾನ : ಸಿದ್ದರಾಮಯ್ಯ
- ಬೆಂಗಳೂರು : ಜ್ಯುವೆಲರಿ ಅಂಗಡಿಯಲ್ಲಿ ಪಿಸ್ತೂಲ್ನಿಂದ ಬೆದರಿಸಿ ಚಿನ್ನಾಭರಣ ಲೂಟಿ