ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ನವದೆಹಲಿ, ಅ.18- ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುಯಾನ್‌ ಅವರ ಪೀಠವು ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಎಸ್‌‍ಐಟಿ ಸಲ್ಲಿಸಿದ ಮನವಿಯನ್ನು ರದ್ದುಗೊಳಿಸಿತು. ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ದೂರು ದಾಖಲಿಸದಂತೆ ತಡೆಯಲು ಭವಾನಿ ರೇವಣ್ಣ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನು ಪ್ರಕರಣದ ವಿಚಾರಣೆ ನಡೆಸಿದ ವೇಳೆ ಸುಪ್ರೀಂಕೋರ್ಟ್‌ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. … Continue reading ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ