Friday, May 17, 2024
Homeರಾಷ್ಟ್ರೀಯಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ನಕಾರ

ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ನಕಾರ

ನವದೆಹಲಿ,ಅ.17- ಜೀವನದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜೀವನದ ಒಂದು ಭಾಗವಾಗಿದ್ದು,ಅಂತಿಮವಾಗಿ ಸಲಿಂಗ ವಿವಾಹ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ತೀರ್ಮಾನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವೇಚನೆಗೆ ಸುಪ್ರೀಕೋರ್ಟ್ ಬಿಟ್ಟಿದೆ.

ಆದರೆ ಐದು ಸದಸ್ಯರ ಪೀಠವು ನಾಲ್ಕು ಪ್ರತ್ಯೇಕ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುತ್ತಿಲ್ಲ ಎಂಬ ಕಾರಣದಿಂದ ವಿಶೇಷ ವಿವಾಹ ಕಾಯಿದೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ. ಸಲಿಂಗ ವಿವಾಹ ಮಾನ್ಯತೆಯ ವಿಚಾರದಲ್ಲಿ ಸಂಸತ್ತು ತೀರ್ಮಾನಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ನಮ್ಮಲ್ಲಿ ನಿರಂತರವಾಗಿ ಉಳಿದಿರುವ ಸಾಂವಿಧಾನಿಕ ಸಿದ್ಧಾಂತವಿದೆ. ನಾವು ಶಾಸನವನ್ನು ಮಾಡಲು ಸಾಧ್ಯವಿಲ್ಲ, ನಾವು ನೀತಿಯನ್ನು ರೂಪಿಸಲು ಸಾಧ್ಯವಿಲ್ಲ, ನಾವು ನೀತಿ ರಚನೆಯ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಎಸ್ ಆರ್ ಭಟ್ ತಿಳಿಸಿದ್ದಾರೆ.

ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಕಳೆದ ಮೇ 11 ರಂದು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾೀಧಿಶರ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು 10 ದಿನಗಳ ವಿಚಾರಣೆಯ ನಂತರ ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದರು.

ಇನ್ನೂ ಪೀಠದ ಐವರು ನ್ಯಾಯಾೀಧಿಶರು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಮಂಡಿಸಿದ ಪರಿಣಾಮ, ತೀರ್ಪಿನಲ್ಲಿ ನಾಲ್ಕು ಪ್ರತ್ಯೇಕ ಮಂಡನೆಗಳನ್ನು ಮಾಡಲಾಗಿದೆ. ಸಿಜೆಐ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ತಮ್ಮ ಅನಿಸಿಕೆಗಳನ್ನು ಮಂಡಿಸಿದರು.

ಬಿಜೆಪಿಯವರು ಹಿಮಾಲಯದ ಎತ್ತರದವರೆಗೂ ಹಗರಣ ಮಾಡಿದ್ದಾರೆ : ಡಿಸಿಎಂ

ಹೊಸ ವಿವಾಹ ವ್ಯವಸ್ಥೆಯನ್ನು ರಚಿಸುವಂತೆ ಸಂಸತ್ತು ಅಥವಾ ಸರ್ಕಾರವನ್ನು ನಾವು ಒತ್ತಾಯಿಸಲು ಸಾಧ್ಯವಿಲ್ಲ. ವಿಶೇಷ ವಿವಾಹ ಕಾಯಿದೆಯ ಸೆಕ್ಷನ್ 4 ಸಲಿಂಗ ದಂಪತಿಗಳನ್ನು ಒಳಗೊಂಡಿಲ್ಲ ಎಂಬ ಕಾರಣಕ್ಕೆ ಅಸಾಂವಿಧಾನಿಕ ಎಂದು ಪರಿಗಣಿಸಲಾಗುವುದಿಲ್ಲ. ವಿಶೇಷ ವಿವಾಹ ಕಾಯಿದೆಯಲ್ಲಿ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು.

ಈ ನ್ಯಾಯಾಲಯವು ಶಾಸಕಾಂಗದ ವ್ಯಾಪ್ತಿಯಲ್ಲಿ ಪ್ರವೇಶಿಸದಂತೆ ಎಚ್ಚರಿಕೆ ವಹಿಸಿದ್ದೇವೆ. ವಿವಾಹ ವ್ಯವಸ್ಥೆಯೊಳಗೆ ಪ್ರವೇಶಿಸುವ ಹಕ್ಕಿನಲ್ಲಿ, ವ್ಯಕ್ತಿಯು ಇನ್ನೊಬ್ಬ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕು ಮತ್ತು ಆ ವಿವಾಹವನ್ನು ಶಾಸನವು ಗುರುತಿಸುವ ಹಕ್ಕು ಎರಡನ್ನೂ ಒಳಗೊಂಡಿದೆ ಎಂದು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ವಿವಾಹ ವ್ಯವಸ್ಥೆಯೊಳಗೆ ಪ್ರವೇಶಿಸುವ ಹಕ್ಕಿನಲ್ಲಿ, ವ್ಯಕ್ತಿಯು ಇನ್ನೊಬ್ಬ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕು ಮತ್ತು ಆ ವಿವಾಹವನ್ನು ಶಾಸನವು ಗುರುತಿಸುವ ಹಕ್ಕು ಎರಡನ್ನೂ ಒಳಗೊಂಡಿದೆ. ಪ್ರತಿಯೊಬ್ಬರಿಗೂ ತಮ್ಮ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿದೆ, ಸರ್ಕಾರವು ಸಲಿಂಗ ಸಂಬಂಧಗಳಿಗೆ ಕಾನೂನು ಸ್ಥಾನಮಾನ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಲಿಂಗ ದಂಪತಿಗೆ ತಾರತಮ್ಯ ಮಾಡದಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ.

ಸಲಿಂಗಕಾಮವು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗದ ವರ್ಗಗಳಿಗೆ ಸೀಮಿತವಾಗಿಲ್ಲ. ಒಬ್ಬರ ಜಾತಿ ಅಥವಾ ವರ್ಗ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆಯೇ ವಿಲಕ್ಷಣತೆ ಇರಬಹುದು. ಮದುವೆಯನ್ನು ಸ್ಥಿರ ಮತ್ತು ಬದಲಾಗದ ಸಂಸ್ಥೆ ಎಂದು ಹೇಳುವುದು ಸರಿಯಲ್ಲ. ವಿಶೇಷ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದರೆ, ಅದು ದೇಶವನ್ನು ಸ್ವಾತಂತ್ರ್ಯ ಪೂರ್ವದ ಯುಗಕ್ಕೆ ಕೊಂಡೊಯ್ಯುತ್ತದೆ. ವಿಶೇಷ ವಿವಾಹ ಕಾಯ್ದೆಯ ಆಡಳಿತದಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬುದನ್ನು ಸಂಸತ್ತು ನಿರ್ಧರಿಸುತ್ತದೆ. ಎಂದು ಪೀಠ ಹೇಳಿದೆ.

ಅವರಿಗೆ ಸುರಕ್ಷಿತ ಮನೆ, ವೈದ್ಯರ ಚಿಕಿತ್ಸೆ, ಅವರ ದೂರುಗಳನ್ನು ಸಲ್ಲಿಸಲು ದೂರವಾಣಿ ಸಂಖ್ಯೆ, ಸಾಮಾಜಿಕ ತಾರತಮ್ಯ ನಡೆದುಕೊಳ್ಳಬಾರದು, ಪೊಲೀಸರು ಕಿರುಕುಳ ನೀಡಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸೂಚಿಸಿದರು.

ಸಲಿಂಗ ವಿವಾಗ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸಲಿಂಗ ವಿವಾಹ ಸಮುದಾಯಕ್ಕಾಗಿ ಹಾಟ್ಲೈನ್ ರಚಿಸಿ, ಸಲಿಂಗ ದಂಪತಿಗಳಿಗೆ ಸುರಕ್ಷಿತ ಮನೆಗಳನ್ನು ರಚಿಸಿ. ಇಂಟರ್ಸೆಕ್ಸ್ ಮಕ್ಕಳನ್ನು ಬಲವಂತವಾಗಿ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಯಾವುದೇ ವ್ಯಕ್ತಿಯನ್ನು ಯಾವುದೇ ಹಾರ್ಮೋನ್ ಚಿಕಿತ್ಸೆಗೆ ಒತ್ತಾಯಿಸಬಾರದು ಎಂದು ಹೇಳಿದರು.

ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುತ್ತಿಲ್ಲ ಎಂಬ ಕಾರಣದಿಂದ ವಿಶೇಷ ವಿವಾಹ ಕಾಯ್ದೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ. ಸಲಿಂಗ ವಿವಾಹ ಮಾನ್ಯತೆಯ ವಿಚಾರದಲ್ಲಿ ಸಂಸತ್ತು ತೀರ್ಮಾನಿಸಬೇಕು. ಹೊಸ ವಿವಾಹ ವ್ಯವಸ್ಥೆಯನ್ನು ರಚಿಸುವಂತೆ ಸಂಸತ್ತು ಅಥವಾ ಸರ್ಕಾರವನ್ನು ನಾವು ಒತ್ತಾಯಿಸಲು ಸಾಧ್ಯವಿಲ್ಲ. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಸಲಿಂಗ ದಂಪತಿಗಳನ್ನು ಒಳಗೊಂಡಿಲ್ಲ ಎಂಬ ಕಾರಣಕ್ಕೆ ಅಸಾಂವಿಧಾನಿಕ ಎಂದು ಪರಿಗಣಿಸಲಾಗುವುದಿಲ್ಲ ಎಂದರು.

ಅವಿವಾಹಿತ ದಂಪತಿಗಳು ಮಗುವನ್ನು ದತ್ತು ತೆಗೆದುಕೊಳ್ಳುವುದನ್ನು ತಡೆಯುವ ನಿಬಂಧನೆಗಳು ತಪ್ಪು. ಭಿನ್ನಲಿಂಗೀಯ ದಂಪತಿ ಮಾತ್ರ ಉತ್ತಮ ಪೋಷಕರಾಗಬಹುದು ಎಂದು ಕಾನೂನು ಹೇಳುವುದಿಲ್ಲ, ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ಹೊಸ ಸಾಮಾಜಿಕ ಸಂಸ್ಥೆಯನ್ನು ರಚಿಸುವುದು ಅವರ ಸೂಚನೆಗಳ ಉದ್ದೇಶವಲ್ಲ. ಈ ನ್ಯಾಯಾಲಯವು ಕೇವಲ ಆದೇಶದ ಮೂಲಕ ಸಮುದಾಯಕ್ಕೆ ಆಧಾರವನ್ನು ಸೃಷ್ಟಿಸುತ್ತಿಲ್ಲ. ಆದರೆ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಗುರುತಿಸುತ್ತಿದೆ. ಲಿವ್-ಇನ್ ಸಂಬಂಧದಲ್ಲಿ ಪ್ರತ್ಯೇಕತೆಗಿಂತ ವಿವಾಹಿತ ಸಂಗಾತಿಯಿಂದ ಬೇರ್ಪಡಿಕೆ ಹೆಚ್ಚು ಕಷ್ಟಕರವಾಗಿದೆ ಎಂಬುದು ನಿಜ ಎಂದು ಚಂದ್ರಚೂಡ್ ಹೇಳಿದರು.

ಉದಾಹರಣೆಗೆ, ಒಬ್ಬ ವ್ಯಕ್ತಿಯು ವಿಚ್ಛೇದನವನ್ನು ಪಡೆಯುವುದನ್ನು ಕಾನೂನು ತಡೆಯುತ್ತದೆ. ಪ್ರತಿ ಮದುವೆಯು ಸ್ಥಿರತೆಯನ್ನು ಒದಗಿಸುತ್ತದೆ ಎಂದು ಭಾವಿಸುವುದು ತಪ್ಪು, ಅಥವಾ ಮದುವೆಯಾಗದ ಜನರು ತಮ್ಮ ಸಂಬಂಧಗಳ ಬಗ್ಗೆ ಗಂಭೀರವಾಗಿಲ್ಲ ಎಂದು ಊಹಿಸಲು ಸಾಧ್ಯವಿಲ್ಲ. ಸುಸ್ಥಿರತೆಯಲ್ಲಿ ಅನೇಕ ಅಂಶಗಳು ಒಳಗೊಂಡಿವೆ. ಸ್ಥಿರ ಸಂಬಂಧದ ಸರಳ ರೂಪವಿಲ್ಲ. ವಿವಾಹಿತ ಭಿನ್ನಲಿಂಗೀಯ ದಂಪತಿಗಳು ಮಾತ್ರ ಮಗುವಿಗೆ ಸ್ಥಿರತೆಯನ್ನು ಒದಗಿಸಬಹುದು ಎಂದು ಸಾಬೀತುಪಡಿಸಲು ಯಾವುದೇ ದಾಖಲೆಗಳಿಲ್ಲ ಎಂದು ಸಿಜೆಐ ತಿಳಿಸಿದರು.

2018ರಲ್ಲಿ ಸಲಿಂಗ ವಿವಾಹವನ್ನು ಅಪರಾಧ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿದ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಇದು ನಗರ ಚಿಂತನೆಯಾಗಿದೆ ಎಂದು ಹೇಳಿತ್ತು. ಇದು ದೊಡ್ಡ ನಗರಗಳಲ್ಲಿ ವಾಸಿಸುವ ಕೆಲವು ಗಣ್ಯ ವ್ಯಕ್ತಿಗಳಿಂದ ಬೇಡಿಕೆಯಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಹೇಳಿತ್ತು.

ಮತ್ತೊಂದೆಡೆ, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಎನ್ಸಿಪಿಸಿಆರ್ ಮತ್ತು ಜಮಿಯತ್-ಉಲಾಮಾ-ಐ-ಹಿಂದ್ ಎಂಬ ಇಸ್ಲಾಮಿಕ್ ವಿದ್ವಾಂಸರ ಮಂಡಳಿ ಸೇರಿದಂತೆ ಪ್ರತಿವಾದಿಗಳು ಅರ್ಜಿಗಳನ್ನು ವಿರೋಧಿಸಿದ್ದರು.

ಎಟಿಎಂ ಯಂತ್ರ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಇದಕ್ಕೂ ಮುನ್ನ ಮೇ ತಿಂಗಳಲ್ಲಿ 10 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸುಪ್ರೀಂ ಕೋಟ್ರ್ಗೆ 20 ಅರ್ಜಿಗಳು ಸಲ್ಲಿಕೆಯಾಗಿದ್ದು, ತೀರ್ಪನ್ನು ಪ್ರಕಟಿಸಲಾಗಿದೆ.

ಈ ಹಿಂದಿನ ವಿಚಾರಣೆಯಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ ಎಂದು ಕೇಂದ್ರ ವಾದಿಸಿತ್ತು.2018 ರಲ್ಲಿ, ಸುಪ್ರೀಂ ಕೋಟ್ರ್ನ ಸಂವಿಧಾನ ಪೀಠವು ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಐಪಿಸಿಯ ಸೆಕ್ಷನ್ 377 ರ ಭಾಗವನ್ನು ರದ್ದುಗೊಳಿಸಿದೆ.

ಅರ್ಜಿಯಲ್ಲೇನಿತ್ತು? ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು. ಇದಕ್ಕೆ ಪೂರಕವಾಗಿ 1954ರ ವಿಶೇಷ ವಿವಾಹ ಕಾಯ್ದೆಯನ್ನು ಮರು ವ್ಯಾಖ್ಯಾನಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 (ಸಿ) ಪುರುಷ ಮತ್ತು ಮಹಿಳೆಯ ವಿವಾಹಕ್ಕೆ ಮಾತ್ರ ಮಾನ್ಯತೆ ನೀಡುತ್ತದೆ. ಇದರಿಂದ ಸಲಿಂಗ ಜೋಡಿಗೆ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡದಿರುವುದು ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಘನತೆಯ ಹಕ್ಕುಗಳ ನಿರಾಕರಣೆಯಾಗಿದೆ ಎಂದು ಹೇಳಲಾಗಿತ್ತು.

RELATED ARTICLES

Latest News