BIG NEWS : ಆರ್ಥಿಕ ದುರ್ಬಲರಿಗೆ ಶೇ.10ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ,ನ.7- ಆರ್ಥಿಕ ದುರ್ಬಲರಿಗೆ ನೀಡಿರುವ ಶೇ.10ರಷ್ಟು ಮೀಸಲಾತಿಯ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂಕೋರ್ಟ್‍ನ ಐವರು ನ್ಯಾಯಮೂರ್ತಿಗಳ ಸಂಯುಕ್ತಪೀಠ ಎತ್ತಿ ಹಿಡಿದಿದೆ. ಬಹುನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಿದೆ. 2019ರ ಜನವರಿಯಲ್ಲಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದು ಜಾರಿಗೊಳಿಸಲಾದ ಆರ್ಥಿಕ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್) ಮೀಸಲಾತಿ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 40ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಸಂಯುಕ್ತ ಪೀಠ ವಿಚಾರಣೆ ನಡೆಸಿತ್ತು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್.ರವೀಂದ್ರಭಟ್, ಬೇಲಾ.ಎಂ ತ್ರಿವೇದಿ, […]