12ಕ್ಕೂ ಹೆಚ್ಚು ಆಮ್ ಆದ್ಮಿ ಶಾಸಕರು ನಾಪತ್ತೆ, ಸಿಎಂ ಕೇಜ್ರಿವಾಲ್ ತುರ್ತು ಸಭೆ
ನವದೆಹಲಿ,ಆ.25- ದೆಹಲಿಯ ಆಮ್ ಆದ್ಮಿ ಪಕ್ಷದ 12ಕ್ಕೂ ಹೆಚ್ಚು ಶಾಸಕರು ಸಂಪರ್ಕಕ್ಕೆ ಸಿಗದೇ ಇರುವುದು ಸಂಚಲನಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಎಲ್ಲಾ ಶಾಸಕರ ಜತೆ ತುರ್ತು ಸಭೆ ನಡೆಸಿದ್ದಾರೆ.ಬಿಜೆಪಿ ದೆಹಲಿ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನ ನಡೆಸುತ್ತಿದ್ದು, ತಲಾ ಶಾಸಕರಿಗೆ 20 ಕೋಟಿ ಮತ್ತು ಸಚಿವ ಸ್ಥಾನದ ಆಮಿಷ ಒಡ್ಡಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಇದರ ಬೆನ್ನಲ್ಲೇ ಇಂದಿನ ಸಭೆಗೆ 12ಕ್ಕೂ ಹೆಚ್ಚು ಶಾಸಕರು ಗೈರು ಹಾಜರಾಗಿದ್ದು, ಕೆಲವರು ಅಜ್ಞಾತ ಸ್ಥಳಕ್ಕೆ ತೆರಳಿರುವ […]