ತೆಲಂಗಾಣದಲ್ಲಿ ಕರ್ನಾಟಕದ ವಿರುದ್ಧ ಆಕ್ಷೇಪಾರ್ಹ ಫಲಕ: ಸಿಎಂ ಬೊಮ್ಮಾಯಿ ಆಕ್ರೋಶ
ಬೆಂಗಳೂರು,ಸೆ.18- ಶೇಕಡಾ 40% ಸರ್ಕಾರಕ್ಕೆ ಸುಸ್ವಾಗತ ಎಂದು ಹೈದರಾಬಾದ್ನಲ್ಲಿ ಹಾಕಿದ್ದ ಆಕ್ಷೇಪಾರ್ಹ ಫಲಕಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿ ಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಘಟನೆಗಳಿಂದ ಎರಡೂ ರಾಜ್ಯಗಳ ನಡುವೆ ಸಂಬಂಧ ಹದಗೆಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣದ ಭ್ರಷ್ಟಾಚಾರವನ್ನು ಕರ್ನಾಟಕದಲ್ಲಿ ಪ್ರಸ್ತಾಪಿಸಿದರೆ ಹೇಗಿರುತ್ತದೆ ಎಂದು ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರಿಗೂ ಎಚ್ಚರಿಕೆ ಕೊಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇಂಥ ಬೆಳವಣಿಗೆಗಳಿಂದ ಕರ್ನಾಟಕ ಮತ್ತು ತೆಲಂಗಾಣ ನಡುವೆ ರಾಜಕೀಯ ಸಂಬಂಧಗಳು […]