ಬಜೆಟ್ ಹೈಲೈಟ್ : ಆ್ಯಸಿಡ್ ದಾಳಿಗೆ ಒಳಗಾದವರ ಪಿಂಚಣಿ ಮೊತ್ತ ಹೆಚ್ಚಳ
ಬೆಂಗಳೂರು,ಮಾ.4- ಗ್ರಾಮ ಸಹಾಯಕರ ಮಾಸಿಕ ಗೌರವಧನ ಹಾಗೂ ಆ್ಯಸಿಡ್ ದಾಳಿಗೊಳಗಾದ ಮಹಿಳೆಯರ ಮಾಸಿಕ ಪಿಂಚಣಿಯನ್ನು ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್ನಲ್ಲಿ ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನೀಡಲಾಗುತ್ತಿದ್ದ ಮೂರು ಸಾವಿರ ಪಿಂಚಣಿಯನ್ನು 10 ಸಾವಿರ ರೂ.ಗೆ ಹೆಚ್ಚಿಸಿದ್ದು, ಇವರಿಗಾಗಿ ಹೊಸ ಕಾರ್ಯಕ್ರಮ ರೂಪಿಸುವುದಾಗಿ ಘೋಷಸಿದ್ದಾರೆ. ಗ್ರಾಮ ಸಹಾಯಕರಿಗೆ ನೀಡುತ್ತಿದ್ದ ಮಾಸಿಕ ಗೌರವಧನವನ್ನು ಒಂದು ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ.ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಯಡಿ 59.45 ಲಕ್ಷ ಫಲಾನುಭವಿಗಳಿಗೆ ಮಾಸಾಸನ ನೀಡಲಾಗುತ್ತಿದೆ. ಇದರ ಪಿಂಚಣಿಯನ್ನು 600ರಿಂದ 800ರೂ.ಗಳಿಗೆ […]