ಅಮರನಾಥಗೌಡ ಹಾಗೂ ದ್ವಾರಕೀಶ್ಗೆ ನಾಳೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು, ಡಿ.4- ನಾಳೆ ನಡೆಯಲಿರುವ ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅನಿವಾಸಿ ಭಾರತೀಯ ಹಾಗೂ ಅಮೆರಿಕಾ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡರು, ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್, ಚಿತ್ರಕಲಾವಿದ ಡಾ. ಟಿ.ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗತ್ತದೆ. ಕನ್ನಡ ಚಲನಚಿತ್ರೋದ್ಯಮಕ್ಕೆ ನೀಡಿದ ಕೊಡುಗೆಗೆ ದ್ವಾರಕೀಶ್ ಅವರಿಗೆ, ಕಾನೂನು ಮತ್ತು ಸಮುದಾಯ ಸೇವಾ ಕ್ಷೇತ್ರದಲ್ಲಿ ಕೊಡುಗೆಯನ್ನು ನೀಡಿರುವ ಅಮೆರಿಕಾದ ಕಾನೂನು ಸಂಸ್ಥೆಯ ಸಂಸ್ಥಾಪನಾ […]