ಮತಾಂತರದ ಮೂಲಕ ಧರ್ಮ ಹಿಂದೂ ಒಡೆಯಲಾಗುತ್ತಿತ್ತು : ಅರಗ ಜ್ಞಾನೇಂದ್ರ

ಬೆಂಗಳೂರು,ಸೆ.16-ಮತಾಂತರ ನಿಷೇಧ ಕಾಯ್ದೆಯಿಂದ ಯಾವುದೇ ಧರ್ಮದವರಿಗೆ ತೊಂದರೆಯಾಗುವುದಿಲ್ಲ. ಸೇವೆ ಹೆಸರಿನಲ್ಲಿ ಮತಾಂತರ ಮಾಡುವ ಪ್ರಕ್ರಿಯೆಗೆ ಕಡಿವಾಣ ಬೀಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‍ನಲ್ಲಿ ಮತಾಂತರ ನಿಷೇಧ ಕಾಯ್ದೆ ನಿನ್ನೆ ಒಪ್ಪಿಗೆ ಪಡೆದಿದೆ. ಬೆಳಗಾವಿ ಅವೇಶನದಲ್ಲಿ, ವಿಧಾನಸಭೆಯಲ್ಲಿ ಈ ವಿಧೇಯಕಕ್ಕೆ ಒಪ್ಪಿಗೆ ದೊರೆತಿತ್ತು. ಸುಘ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿತ್ತು. ಉಭಯ ಸದನಗಳ ಒಪ್ಪಿಗೆ ಕಾಯ್ದೆಗೆ ದೊರೆತಿದೆ ಎಂದರು. ಇದನ್ನೂ ಓದಿ: ಅಪ್ಪು ಜನ್ಮದಿನವನ್ನು ‘ಸ್ಪೂರ್ತಿ ದಿನ’ವಾಗಿ ಆಚರಿಸಲು ಸರ್ಕಾರ ಘೋಷಣೆ […]

ಮೇಲ್ಮನೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ, ಸುದೀರ್ಘ ಚರ್ಚೆ

ಬೆಂಗಳೂರು, ಸೆ.15- ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನ ಪರಿಷತ್ನಲ್ಲಿಂದು ಮಂಡಿಸಿದಾಗ ಕಾಯ್ದೆಯ ಮೇಲೆ ಸುದೀರ್ಘ ಚರ್ಚೆ ನಡೆಯಿತು.ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಯ ಬಳಿಕ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಮಂಡನೆಗೆ ಅವಕಾಶ ಕಲ್ಪಿಸಿದರು. ಸಚಿವ ಅರಗ ಜ್ಞಾನೇಂದ್ರ, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಮಂಡಿಸಿ, ಇದು ಮಹತ್ವದ ಕಾಯ್ದೆ, ಪರಿಸ್ಥಿತಿ ಎಲ್ಲರಿಗೂ ಅರಿವಿದೆ. 2013ರಲ್ಲಿ ಕಾಂಗ್ರೆಸ್ ಸರ್ಕಾರವು ಈ ಕಾಯ್ದೆ ಕುರಿತು ಚಿಂತನೆ ನಡೆಸಿದೆ. […]