ಬಡವರ ಕನಸು ನನಸಾಗಿಸುವುದೇ ನಮ್ಮ ಸರ್ಕಾರದ ಜವಾಬ್ದಾರಿ : ಸಿಎಂ

ಬೆಂಗಳೂರು,ಮಾ.20- ಬಡವರ ಕನಸನ್ನು ನನಸು ಮಾಡುವ ಜವಾಬ್ದಾರಿಯೇ ಈ ಸರ್ಕಾರದ ಜವಾಬ್ದಾರಿ. ನಿಮಗೆ ನೆಮ್ಮದಿ ಸಿಕ್ಕರೆ ನಮಗೆ ಪುಣ್ಯ ಸಿಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಂಗಳೂರುನಗರ ಜಿಲ್ಲಾಡಳಿತ ಹಾಗೂ ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 94ಸಿಸಿ ಮತ್ತು 9ಸಿಸಿ ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರಗಳು ಐದು ವರ್ಷ ದಾಖಲೆ ಪತ್ರಗಳನ್ನು ಬಾವಿಯಲ್ಲಿಡುವುದು, ಚುನಾವಣೆ ಬಂದಾಗ ಅದನ್ನು […]
ಕಳೆಗಟ್ಟಿದ ಕಡಲೆಕಾಯಿ ಪರಿಷೆ, ಹರಿದುಬಂದ ಜನಸಾಗರ

ಬೆಂಗಳೂರು, ನ.20- ಕಾರ್ತಿಕ ಮಾಸದ ಅಂಗವಾಗಿ ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಜನಸಾಗರ ಹರಿದು ಬರುತ್ತಿದೆ. ಈ ಬಾರಿ ಕಡಲೆಕಾಯಿ ಪರಿಷೆಗೆ ಸೋಮವಾರದ ಬದಲಿಗೆ ಇಂದು ಸಂಜೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಿಂದಲೇ ಪರಿಷೆ ಕಳೆಗಟ್ಟಿದ್ದು, ರಜಾ ದಿನವಾದ ಇಂದು ನಗರದ ಜನತೆ ಪರಿಷೆಗೆ ಬಂದು ದೊಡ್ಡಗಣಪತಿ ಹಾಗೂ ದೊಡ್ಡ ಬಸವಣ್ಣ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬಡವರ ಬಾದಾಮಿಯನ್ನು ಖರೀದಿಸಿ ಸವಿದರು. ರಾಜ್ಯದ ವಿವಿಧ […]
ಬಸವನಗುಡಿಯಲ್ಲಿ ಕಡಲೆಕಾಯಿ ಪರೀಷೆಗೆ ನಾಳೆ ಸಿಎಂ ಚಾಲನೆ

ಬೆಂಗಳೂರು,ನ.19- ಇತಿಹಾಸ ಪ್ರಸಿದ್ದ ಬಸವನಗುಡಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಕಡಲೆಕಾಯಿ ಪರೀಷೆಗೆ ನಡೆಯುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರೀಷೆಗೆ ಚಾಲನೆ ನೀಡಲಿದ್ದಾರೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕಡಲೆಕಾಯಿ ಪರೀಷೆಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಈ ಬಾರಿ ರಾಜ್ಯ ಮತ್ತು ಹೊರರಾಜ್ಯದಿಂದಲೂ ಅಪಾರ ಪ್ರಮಾಣದಲ್ಲಿ ವ್ಯಾಪಾರಿಗಳು ಆಗಮಿಸಿದ್ದಾರೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳು ಸೇರಿ ಚಿಂತಾಮಣಿ, ಕೋಲಾರ, ಮಾಲೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಾಗಡಿ, ಹೊಸಕೋಟೆ ಮಾತ್ರವಲ್ಲದೆ ನಡೆಯ ತಮಿಳುನಾಡು, ಆಂಧ್ರಪ್ರದೇಶಗಳಿಂದ ರೈತರು […]