ಮೀಸಲಾತಿ ಹೆಚ್ಚಳದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಹೆಜ್ಜೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ಲಿಂಗಾಯತರು, ಒಕ್ಕಲಿಗರು ಹಾಗೂ ದಲಿತ ಸಮುದಾಯಕ್ಕೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಮೂಲಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಜಾತಿಗಳ ಓಲೈಕೆ ಮಾಡುವ ಐತಿಹಾಸಿಕ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ.ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ.ಇನ್ನು 2 ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 […]
ದಿನದ 24 ಗಂಟೆ ಕಾರ್ಯನಿರ್ವಹಿಸುವ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್

ಬೆಂಗಳೂರು, ಫೆ.17- ಸರ್ಕಾರಿ ವೆಬ್ಸೈಟ್ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ […]
ಬೆಂಗಳೂರಲ್ಲಿ ಭುವನೇಶ್ವರಿ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಸ್ಥಾಪನೆ

ಬೆಂಗಳೂರು, ಫೆ. 17- ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ಆಯವ್ಯ ಮಂಡಿಸಿದ ಅವರು, ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದರು. ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು […]
ಜನನಿಬಿಡ ಪ್ರದೇಶಗಳಲ್ಲಿ 250 ಶೀ ಟಾಯ್ಲೆಟ್ಗಳ ನಿರ್ಮಾಣ

ಬೆಂಗಳೂರು,ಫೆ.17- ನಿರ್ಭಯ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಿದರುವ ಸೇಫ್ ಸಿಟಿ ಯೋಜನೆ ಕಾಮಗಾರಿಗೆ 261 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ದ ಸೇಫ್ ಸಿಟಿ ಪ್ರಾಜೆಕ್ಟ್ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿ 1640 ಸ್ಥಳಗಳಲ್ಲಿ 4100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದೆ. ಈ ಕ್ಯಾಮರಾಗಳನ್ನು ಇಂಟಿಗ್ರೆಟೆಡ್ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರ್ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ […]
ಬೆಂಗಳೂರು ನಗರಕ್ಕೆ 10 ಸಾವಿರ ಕೋಟಿ ರೂ. ಬಂಪರ್ ಕೊಡುಗೆ

ಬೆಂಗಳೂರು, ಫೆ, 17- ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ನಲ್ಲಿ ನಗರದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದಲ್ಲಿ 6 ಸಾವಿರ […]
ಬೆಂಗಳೂರಿನಲ್ಲಿ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು

ಬೆಂಗಳೂರು, ಫೆ, 17- ನಗರದ 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನೆರವಾಗುವ 5550 ಕೋಟಿ ರೂ. ವೆಚ್ಚದ 775 ಎಂಎಲ್ಡಿ ಸಾಮಥ್ರ್ಯದ ಎಲ್ಲಾ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಜೆಟ್ನಲ್ಲಿ ತಿಳಿಸಿದ್ದಾರೆ. ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಎರಡನೆ ಹಂತದ ಯೋಜನೆ ಅನುಷ್ಠಾನಗೊಳಿಸಲು ಜಲಮಂಡಳಿಗೆ 200 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ. ಬಜೆಟ್ ಹೈಲೈಟ್ಸ್ : 116 ನೂತನ […]
ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ

ಬೆಂಗಳೂರು,ಫೆ.17- ಚುನಾವಣಾ ವರ್ಷದಲ್ಲಿ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ, ನೀರಾವರಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಅದರಲ್ಲೂ ಶಿಕ್ಷಣ ಇಲಾಖೆ ಬಜೆಟ್ನ ಅನುದಾನ ಹಂಚಿಕೆಯಲ್ಲಿ ಸಿಂಹಪಾಲು ಪಡೆದಿದೆ. ಇತರ ವೆಚ್ಚಗಳ ಗಾತ್ರ ಶೇ.30ರಷ್ಟನ್ನು ದಾಟಿದೆ. ಇನ್ನೂ ಆದಾಯ ಸಂಗ್ರಹದಲ್ಲಿ ಎಂದಿನಂತೆ ವಾಣಿಜ್ಯ ತೆರಿಗೆ ಸಿಂಹಪಾಲು ಹೊಂದಿದೆ. ಮುಂದಿನ ವರ್ಷ 97 ಸಾವಿರ ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಇದೆ. ಇದು ಒಟ್ಟು ಆದಾಯದಲ್ಲಿ ಶೇ.59ರಷ್ಟು. ಇನ್ನೂ ಅಬಕಾರಿ ಬಾಬ್ತಿನಿಂದ 35 ಸಾವಿರ […]
ಬಜೆಟ್ ನಲ್ಲಿ ಬಂಪರ್ ಘೋಷಣೆ ಮಾಡಲು ಬೊಮ್ಮಾಯಿ ಭರ್ಜರಿ ತಯಾರಿ

ಬೆಂಗಳೂರು,ಜ.14- ಮುಂದಿನ ತಿಂಗಳ ಫೆಬ್ರವರಿ 17ರಂದು ಪ್ರಸ್ತಕ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಮುಂಬರುವ ಚುನಾವಣೆಗೆ ಇದು ಎಲೆಕ್ಷನ್ ಬಜೆಟ್ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಚುನಾವಣಾ ವರ್ಷ ಆಗಿರುವ ಸಹಜವಾಗಿ ಜನಪರವಾದ ಯೋಜನೆಗಳನ್ನು ಘೋಷಣೆ ಮಾಡಬೇಕಾಗುತ್ತದೆ. ಕಾಲಮಿತಿಯೊಳಗೆ ಅನುಷ್ಠಾನ ಮಾಡಬಹುದಾದ ಘೋಷಣೆಗಳನ್ನು ಮಾಡುತ್ತೇವೆ. ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ದಿನಾಂಕವನ್ನು ನಿಗದಿ ಮಾಡುವುದಾಗಿ ತಿಳಿಸಿದರು. ಪ್ರಮುಖವಾಗಿ ದುಡಿಯುವ ವರ್ಗಕ್ಕೆ ಸಹಾಯವಾಗುವ ಕೆಲಸ ಮಾಡುತ್ತೇವೆ. ಪ್ರತಿಯೊಂದು ಕುಟುಂಬಕ್ಕೆ […]
ಮಹಾಪುಂಡರಿಗೆ ಮತ್ತೊಮ್ಮೆ ವಾರ್ನ್ ಮಾಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ,ಡಿ.18- ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರ ಪುಂಡಾಟಿಕೆಗೆ ಕಿಡಿಕಾರಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವರನ್ನು ಯಾವ ರೀತಿ ಇಡಬೇಕೊ ಅದನ್ನು ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಹುಬ್ಬಳ್ಳಿಯ ಆದರ್ಶ ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ. ಅವರಿಗೆ ಸೌಹಾರ್ದಯುತವಾಗಿ ಇರಲು ಗೊತ್ತಿಲ್ಲ ಎಂದರು. ಮಹಾರಾಷ್ಟ್ರ- ಕರ್ನಾಟಕ ಮುಖ್ಯಮಂತ್ರಿಗಳ ಹಾಗೂ ಪ್ರಮುಖರ ಜೊತೆಗೆ […]
ದಿಢೀರ್ ದೆಹಲಿಯತ್ತ ಸಿಎಂ ಬೊಮ್ಮಾಯಿ, ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ

ಬೆಂಗಳೂರು,ನ.28- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ನನೆಗುದಿಗೆ ಬಿದ್ದಿರುವ ನಿರೀಕ್ಷಿತ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ. ದೆಹಲಿಗೆ ಬರುವಂತೆ ಬುಲಾವ್ ಬಂದ ಬೆನ್ನಲ್ಲೇ ಬೊಮ್ಮಾಯಿಯವರ ಭೇಟಿ ನಿಗದಿಯಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ […]