ಈ ವರ್ಷದ ಕೊನೆಯ ‘ಮನ್ ಕೀ ಬಾತ್’, ಇಲ್ಲಿದೆ ಹೈಲೈಟ್ಸ್

ನವದೆಹಲಿ,ಡಿ.25- ಪ್ರಧಾನಿ ನರೇಂದ್ರಮೋದಿ ಅವರು ಜನಪ್ರಿಯ ರೇಡಿಯೋ ಸರಣಿ ಮನ್ ಕೀ ಬಾತ್ನ ವರ್ಷದ ಕೊನೆ ಹಾಗೂ 96ನೇ ಆವೃತ್ತಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಕೋವಿಡ್ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ. ಒಂದು ವರ್ಷದ ದೇಶದ ಸಾಧನೆಗಳು ಮತ್ತು ಪ್ರಮುಖ ಘಟನೆಗಳನ್ನು ಸ್ಮರಿಸಿಕೊಂಡಿರುವ ಪ್ರಧಾನಿಯವರು, ಸ್ವಾವಲಂಬಿ ಭಾರತಕ್ಕೆ ದೇಶದ ಎಲ್ಲರ ಸಹಕಾರ ಮತ್ತು ಸಹಭಾಗಿತ್ವ ಮಹತ್ವದ್ದಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಭಾರತೀಯರು ಜಾಗೃತರಾಗಬೇಕು ಮತ್ತು ಮುಂಜಾಗ್ರತಾ ಕ್ರಮಗಳನ್ನು […]