ವನ್ಯಪ್ರಾಣಿ ದಾಳಿಯಿಂದ ಸಾವನ್ನಪ್ಪಿದರೆ 15 ಲಕ್ಷ ಪರಿಹಾರ

ಬೆಂಗಳೂರು, ಫೆ.17- ಮಾನವ- ವನ್ಯಪ್ರಾಣಿ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣ ಹಾನಿಗೆ ನೀಡುವ ಪರಿಹಾರವನ್ನು 7.50 ಲಕ್ಷ ರೂ. ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬೆಳೆಹಾನಿ ಪ್ರಕರಣಗಳಲ್ಲಿ ನೀಡುತ್ತಿರುವ ಪರಿಹಾರ ಧನವನ್ನೂ ದ್ವಿಗುಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ತಿಳಿಸಿದರು. ಮಾನವ- ಪ್ರಾಣಿ ಸಂಘರ್ಷವನ್ನು ನಿಯಂತ್ರಿಸಲು, ಸಂಘರ್ಷ ಕ್ಷೇತ್ರದಿಂದ ಸೆರೆಹಿಡಿಯಲ್ಪಟ್ಟ ವನ್ಯ ಪ್ರಾಣಿಗಳನ್ನು, ಅವುಗಳ ನೈಸರ್ಗಿಕ ಆವಾಸ ಸ್ಥಾನ ಪ್ರದೇಶಗಳನ್ನು ಗುರುತಿಸಿ ಬಿಡುಗಡೆ ಮಾಡಲು ಭದ್ರಾ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವನಗಳಲ್ಲಿ […]
ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ಒತ್ತಾಯ

ಬೆಂಗಳೂರು, ಡಿಸೆಂಬರ್, 6: ಮುಂಬರುವ 2023-24 ಕೇಂದ್ರ ಬಜೆಟ್ನಲ್ಲಿ ಎಲ್ಲ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿಎಫ್ಟಿಎಫ್ಕೆ ಒತ್ತಾಯಿಸಿದೆ. ಅಲ್ಲದೆ, ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕದ ಎಲ್ಲ ಸಂಸತ್ ಸದಸ್ಯರಿಗೂ ಪತ್ರ ಬರೆಯಲಾಗಿದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಯುವಜನ ರಕ್ಷಣೆ ಮತ್ತು ತಂಬಾಕು ನಿಯಂತ್ರಣಕ್ಕಾಗಿ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿರುವ ತಂಬಾಕು ಮುಕ್ತ ಕರ್ನಾಟಕ ವೇದಿಕೆ (ಸಿಎಫ್ಟಿಎಫ್ಕೆ) ಮತ್ತು ಕರ್ನಾಟಕ ನೋ ಫಾರ್ ಟೊಬ್ಯಾಕೊ (ಕೆಎನ್ಓಟಿ)ಸಂಸ್ಥೆಗಳ […]