ಬಿಜೆಪಿ, RSSಗೆ ಹೆದರಿ ಗುಲಾಂನಬಿ ರಾಜೀನಾಮೆ ನೀಡಿದ್ದಾರೆ : ಖರ್ಗೆ
ಬೆಂಗಳೂರು,ಆ.27- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂನಬಿ ಅಜಾದ್ ಬಿಜೆಪಿ, ಆರ್ಎಸ್ಎಸ್ಗೆ ಹೆದರಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಸರಿಯಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಗುಲಾಂನಬಿ ಅಜಾದ್ 46 ವರ್ಷದಿಂದ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರಗಳನ್ನು ಪಡೆದಿದ್ದಾರೆ. 6 ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. 20ರಿಂದ 25 ವರ್ಷಗಳ ಕಾಲ ಸಚಿವರಾಗಿದ್ದರು. ಪಕ್ಷದ ಮಟ್ಟದಲ್ಲೂ ಅತ್ಯುತ್ತಮ ಸ್ಥಾನ ಪಡೆದಿದ್ದರು ಎಂದು ಹೇಳಿದರು. ಪ್ರಸ್ತುತ ಪಕ್ಷಕ್ಕೆ ಒಳ್ಳೆಯ ಪರಿಸ್ಥಿತಿ ಇಲ್ಲ. […]