ಬಗೆಹರಿಯದ ಹಿಜಾಬ್ ವಿವಾದ, ಮತ್ತಷ್ಟು ದಿನ ಶಾಲಾ-ಕಾಲೇಜು ಬಂದ್..!
ಬೆಂಗಳೂರು,ಫೆ.10- ರಾಜ್ಯದಲ್ಲಿ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ ಈಗಾಗಲೇ ಶಾಲಾಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿತ್ತು. ನಾಳೆ ಈ ಅವಧಿ ಮುಗಿಯಲಿದ್ದು, ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಸ್ತರಣೆ ಮಾಡಲು ಸರ್ಕಾರ ಒಲವು ತೋರಿದೆ. ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವ […]